23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಇಲ್ಲಿಯ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸ್ ವಸತಿನಿಲಯದ ಬಳಿಯಿರುವ ಅಡಿಕೆ ತೋಟ ದಲ್ಲಿ
ಬಳಿಯಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಚಿರತೆ ಪತ್ತೆಯಾದ ಬಗ್ಗೆ ವರದಿಯಾಗಿದೆ.

ಬೆಳಿಗ್ಗೆ ವಸತಿ ನಿಲಯದ ಮಕ್ಕಳು ಬಟ್ಟೆ ಒಗೆಯಲು ಹೊರಗೆ ಬಂದಾಗ ನಿಲಯಕ್ಕೆ ತಾಗಿಕೊಂಡು ಪಕ್ಕದಲ್ಲಿರುವ ಅಡಿಕೆ ತೋಟದ ಬದಿಯಲ್ಲೇ ಇದ್ದ ಚಿರತೆಯೊಂದನ್ನು ನೋಡಿದ ಶಾಲಾ ಮಕ್ಕಳು ಹೆದರಿ ನಿಲಯದ ಒಳಗೆ ಓಡಿ ಹೋಗಿ ನಿಲಯ ಸಿಬ್ಬಂದಿಗೆ ಮತ್ತು ಸ್ಥಳೀಯರಿಗೆ ಮಾಹಿತಿಯನ್ನು ನೀಡಿದ್ದಾರೆ.

ಅಲ್ಲದೇ ಅದೇ ಪರಿಸರದ ಪಕ್ಕದ ಕೆಲ್ಲಗುತ್ತು ಜಂಕ್ಷನ್ ಬಳಿಯಲ್ಲಿ ಮಹಿಳೆಯೊಬ್ಬರು ಬೆಳಿಗ್ಗೆ 7-15 ರ ಸಮಯದಲ್ಲಿ ಫ್ಯಾಕ್ಟರಿ ಕೆಲಸಕ್ಕೆಂದು ಹೋಗುತ್ತಿರುವ ಸಮಯದಲ್ಲಿ ಚಿರತೆಯೊಂದು ರಸ್ತೆ ಬದಿಯಲ್ಲಿ ಜೋರಾಗಿ ಘರ್ಜನೆ ಮಾಡಿದೆ. ಚಿರತೆ ಬರುತ್ತಿರುವ ಸೂಚನೆ ಅರಿತ ಮಹಿಳೆ ಭಯಭೀತರಾಗಿ ಬೆಳ್ತಂಗಡಿ ಪೇಟೆ ಕಡೆಗೆ ಓಡಿಕೊಂಡು ಹೋಗಿ ಸ್ಥಳೀಯರಿಗೆ ಮಾಹಿತಿಯನ್ನು ನೀಡಿದ್ದಾರೆ.

ಪ್ರತ್ಯಕ್ಷದರ್ಶಿಗಳು ಸ್ಥಳೀಯರು ಮಾಹಿತಿಯನ್ನು ಪಡಕೊಂಡ ಬಿ.ಕೆ.ವಸಂತ್ ರವರು ಸ್ಥಳೀಯರಿಗೆ ಶಾಲಾ ಮಕ್ಕಳಿಗೆ ಈ ಮಾಹಿತಿಯನ್ನು ತಿಳಿಸಿ ಎಚ್ಚರಿಕೆ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಆರ್ ಎಫ್ ಒ ತ್ಯಾಗರಾಜ್
ರವರಿಗೆ ಮಾಹಿತಿಯನ್ನು ನೀಡಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ,ಪರಶಿವ ಮೂರ್ತಿ, ಬಿ.ಕೆ ವಸಂತ್, ಸ್ಥಳೀಯ ಮುಖಂಡರಾದ ಸನತ್ ಕುಮಾರ್ ಜೈನ್, ಜಯಕುಮಾರ್,ಹರೀಶ್ ಜೈನ್ , ಹರೀಶ್ ಆಟೋ ಕೆಲ್ಲಗುತ್ತು,
ಮತ್ತಿತರರು ಮುಗುಳಿ ಕೆಲ್ಲಗುತ್ತು , ಪ್ರದೇಶದಲ್ಲಿ ಚಿರತೆ ಬಂದಿರುವ ಬಗ್ಗೆ ಅದರ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಿ ಪರಿಶೀಲನೆ ಮಾಡಿದ್ದಾರೆ.

ಈ ದಿನ ಸಂಜೆ ಚಿರತೆ ಬರುವ ನಿಗದಿತ ಸ್ಥಳವೊಂದನ್ನು ಗುರುತಿಸಿ ಆ ಪ್ರದೇಶದಲ್ಲಿ ಚಿರತೆ ಹಿಡಿಯಲು ಬೋನು (ಗೂಡು)ನ ವ್ಯವಸ್ಥೆ ಮಾಡಲಾಗಿದೆ. ಮತ್ತು ರಾತ್ರಿ ಮತ್ತು ಬೆಳ್ಳಂಬೆಳಗೆ ಸಂಚರಿಸುವ ಸ್ಥಳೀಯ ಜನರಿಗೆ ಹೊರಗಡೆ ತಿರುಗಾಡದಂತೆ ಮಾಹಿತಿಯನ್ನು ನೀಡಿದ್ದಾರೆ.

Related posts

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!