25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಪ್ರಾಂತೀಯ ಸಮ್ಮೇಳನ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸೇವೆಯೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ ಎಂದು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಜಗದೀಶ್ ಚಂದ್ರ ಡಿ.ಕೆ. ಅವರು ಹೇಳಿದರು.

ಅವರು ಬೆಳುವಾಯಿ ಖಂಡಿಗ ಗ್ರೀನ್ಸ್ ಆವರಣದಲ್ಲಿ ನಡೆದ ಲಯನ್ಸ್‌ ಕ್ಲಬ್ ಜಿಲ್ಲೆ 317ಡಿ ರೀಜಿಯನ್ 10ರ ಲಯನ್ಸ್ ಪ್ರಾಂತೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮ್ಮೇಳನವನ್ನು ಲಯನ್ಸ್ ಪ್ರಾಂತ್ಯ ಪ್ರಥಮ ಮಹಿಳೆ ಸುಮತಿ ಜೆ. ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಹೆಚ್.ಆರ್. ಕೇಶವ ಮಾತನಾಡಿ, “ಮಾನವೀಯತೆ ಮತ್ತು ಸೇವೆ ಒಗ್ಗೂಡಿದಾಗ ಮೌಲ್ಯಗಳಿಗೆ ಹೆಚ್ಚಿನ ಮಹತ್ವ ಸಿಗುತ್ತದೆ. ಸೇವೆಗೆ ಶಿಕ್ಷಣವೇ ಕಡ್ಡಾಯ ಮಾನದಂಡವಲ್ಲ” ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಮಂಗಳೂರು ಐಎಂಎ ಅಧ್ಯಕ್ಷ ಡಾ. ಸದಾನಂದ ಪೂಜಾರಿ , ಲಯನ್ಸ್‌ ವಲಯ ಅಧ್ಯಕ್ಷ ಕುಡ್ಲಿ ಅರವಿಂದ ಶೆಣೈ ಅಭಿನಂದನಾ ಮಾತುಗಳೊಂದಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಲಯನ್ಸ್‌ ವಲಯ ಅಧ್ಯಕ್ಷರಾದ ಮೆಲ್ವಿನ್ ಸಲ್ವಾನ, ಜೊಸ್ಸಿ ಮಿನೇಜಸ್, ಪ್ರಾಂತೀಯ ಸಮ್ಮೇಳನ ಅಧ್ಯಕ್ಷ ಪ್ರವೀಣ್ ಕುಮಾರ್ ಇಂದ್ರ, ಕಾರ್ಯದರ್ಶಿ ಹೆರಾಲ್ಡ್ ತಾವೋ, ಉಪಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಖಜಾಂಚಿ ಹರೀಶ್ ಪೂಜಾರಿ, ಸಂಚಾಲಕ ಓಸ್ವಾಲ್ಡ್ ಲಯನ್ಸ್ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆ ಪ್ರತಿಭಾ ಹೆಬ್ಬಾರ್, ಸುಧೀರ್ ಭಂಡಾರಿ, ಮುರಳಿ ಬಲಿಪ, ಜಾನೆಟ್ ಡಿ., ಅರುಣ್ ಕಾರ್ಡೋಜ ಹಾಗೂ ಲಿಯೋ ಕ್ಲಬ್‌ ಅಧ್ಯಕ್ಷರುಗಳು, ವೇಣೂರು ಲಯನ್ಸ್ ಕಾರ್ಯದರ್ಶಿ ಜಯರಾಮ್ ಹೆಗ್ಡೆ ಮತ್ತು ಕೋಶಾಧಿಕಾರಿ ಸತೀಶ್ ಚಿಗುರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೃಷಿಕ ವಿ.ಎಸ್. ಜಯರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಲಯನ್ಸ್ ಸೇವಾ ಕಾರ್ಯಗಳನ್ನು ಪ್ರದರ್ಶಿಸಲಾಯಿತು. ಮಂಗಳೂರಿನ ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!