22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.

ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ರವರು ಹಸಿರು ನಿಶಾನೆಯನ್ನು ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು.

ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮವು ನಡೆಯಿತು.
ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೇಪೇಟೆ ಇದರ ಉಪಾಧ್ಯಕ್ಷ ಹೈದರ್ ಮದನಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇದರ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶರೀಫ್, ಪ್ರಮುಖರಾದ ಹನೀಫ್, ಅಶ್ರಫ್, ಉಬೆದ್ ನಜತ್, ನೃತ್ಯ ತರಬೇತುದಾರ ಉದಯ್ ಎ ಕೆ, ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya
error: Content is protected !!