23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷ ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು.

ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ರವರು ಹಸಿರು ನಿಶಾನೆಯನ್ನು ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು.

ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮವು ನಡೆಯಿತು.
ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೇಪೇಟೆ ಇದರ ಉಪಾಧ್ಯಕ್ಷ ಹೈದರ್ ಮದನಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇದರ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶರೀಫ್, ಪ್ರಮುಖರಾದ ಹನೀಫ್, ಅಶ್ರಫ್, ಉಬೆದ್ ನಜತ್, ನೃತ್ಯ ತರಬೇತುದಾರ ಉದಯ್ ಎ ಕೆ, ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya
error: Content is protected !!