23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya
error: Content is protected !!