September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!