March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಕಲ್ಮಂಜ : ಧರ್ಮಸ್ಥಳ-ಮುಂಡಾಜೆ ಸಂಪರ್ಕ ರಸ್ತೆಯ ಕಲ್ಮಂಜ ಗ್ರಾಮದ ಕೊತ್ತಲಿಗೆ, ಒಂಜರೆಬೈಲು ಹಾಗೂ ಪಿಲತ್ತಡ್ಕದಲ್ಲಿ ಒಟ್ಟು 3 ನೂತನ ಸೇತುವೆ ನಿರ್ಮಾಣಕ್ಕೆ ರೂ. 3.75 ಅನುದಾನವನ್ನು ಒದಗಿಸಿ, ಇಂದು ಮೂರೂ ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ಶ್ರಮ ವಹಿಸುತ್ತಿದ್ದೇನೆ. ಧರ್ಮಸ್ಥಳ ಮುಂಡಾಜೆ ರಸ್ತೆಯು ಅತ್ಯಂತ ಪ್ರಮುಖ ರಸ್ತೆಗಳಲ್ಲೊಂದಾಗಿದ್ದು, ಈಗಾಗಲೇ 3 ನೂತನ ಸೇತುವೆ ನಿರ್ಮಾಣಕ್ಕೆ ರೂ. 3.75 ಕೋಟಿ ಅನುದಾನ ಮೀಸಲಿರಿಸಿ, ಶಿಲನ್ಯಾಸ ನೆರವೇರಿಸಲಾಗಿದೆ. ಆದಷ್ಟು ಶೀಘ್ರವೇ ನೂತನ ಸೇತುವೆಗಳ ನಿರ್ಮಾಣವಾಗುತ್ತದೆ ಎಂದು ಭರವಸೆ ನೀಡಿದರು. ಸೇತುವೆ ನಿರ್ಮಾಣ ಕಾರ್ಯದ ಸಂದರ್ಭದಲ್ಲಿ ಸ್ಥಳೀಯರು ಸಂಪೂರ್ಣ ಸಹಕಾರ ನೀಡಬೇಕಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಥಳೀಯರಾದ ಶ್ರೀನಿವಾಸ್ ರಾವ್ ಅವರು, ಶಾಸಕರು ಗ್ರಾಮಸ್ಥರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸುತ್ತಿದ್ದಾರೆ. ಮುಂಡಾಜೆ ಹಾಗೂ ಕಲ್ಮಂಜ ಗ್ರಾಮಸ್ಥರ ಬಹುಬೇಡಿಕೆಯ ಮೂರು ಸೇತುವೆಗಳನ್ನು ಅಭಿವೃದ್ಧಿಗೊಳಿಸುತ್ತಿರುವುದು ಸಂತಸ ತಂದಿದೆ. ಅಲ್ಲದೆ, ಎರಡು ಭಾಗವಾಗಿದ್ದ ಕಲ್ಮಂಜ ಗ್ರಾಮವನ್ನು ಪಜಿರಡ್ಕದಲ್ಲಿ ಕಿಂಡಿ ಅಣೆಕಟ್ಟು ಸಹಿತ ಬೃಹತ್ ಸೇತುವೆ ನಿರ್ಮಾಣದ ಮೂಲಕ ಒಂದು ಮಾಡಿದ್ದಾರೆ. ತಾಲೂಕಿನ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇಂತಹ ಶಾಸಕರನ್ನು ಪಡೆದ ನಾವೇ ಪುಣ್ಯವಂತರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್. ಸಾಲ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ವಿಮಲ, ಗ್ರಾ ಕಾರ್ಯದರ್ಶಿ ಸರೋಜಿನಿ, ಗ್ರಾಮ ಪಂಚಾಯತ್ ಸದಸ್ಯರು, ಬೂತ್ ಬಿಜೆಪಿ ಅಧ್ಯಕ್ಷರಾದ ಅನಿಲ್ ಗೌಡ, ಸ್ಥಳೀಯರಾದ ಸುಬ್ರಹ್ಮಣ್ಯ ಹೆಬ್ಬಾರ್, ಶ್ರೀನಿವಾಸ್ ರಾವ್, ದೇವಪ್ಪ ಆಚಾರಿ, ಪ್ರದೀಪ್ ಚಿಪ್ಳೂಣ್ ಕರ್, ಇಂಜಿನಿಯರ್, ಗುತ್ತಿಗೆದಾರರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Related posts

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
error: Content is protected !!