July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಾಲ್ಕು ವರ್ಷದ ಪ್ರಜ್ಞಾ ರವರು ಎಂಡೋಸಲ್ಫಾನ್ ನಿಂದ ಬಳಲುತಿದ್ದು ಆರೋಗ್ಯದ ನೆರವಿಗಾಗಿ ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ ಏಕಕಾಲದಲ್ಲಿ ಪೆನ್ನು ಮಾರಿ ಅದರಲ್ಲಿ ಬಂದ ಹಣವನ್ನು ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಫೆ. 16ರಂದು ನಡೆಯಲಿದೆ ಎಂದು ರಾಜಕೇಸರಿ ಸಂಸ್ಥಾಪಕ ದೀಪಕ್ ಹೇಳಿದರು. ಅವರು ಮಂಗಳವಾರ ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ಹತ್ತು ರೂಪಾಯಿ ಮೌಲ್ಯದ ಪೆನ್ನು ಮಾರಾಟ ಮಾಡಿ ಅದರಲ್ಲಿ ಬಂದ ಲಾಭಾಂಶವನ್ನು ಆರೋಗ್ಯದ ನೇರವಿಗಾಗಿ ಕುಟುಂಬಕ್ಕೆ ಹಸ್ತಂತಾರಿಸಲಾಗುವುದು. ಬೆಳ್ತಂಗಡಿ ಬಸ್‌ನಿಲ್ದಾಣ, ಉಜಿರೆ, ಗುರುವಾಯನಕೆರೆ ಪರಿಸರದಲ್ಲಿ ಸಂಘಟನೆ ಸದಸ್ಯರು ಈ ಕಾರ್ಯಕ್ರಮ ನಡೆಸಲಿದ್ದಾರೆ. ಕಟ್ಟೆಮಾರ್ ಮಂತ್ರದೇವಾತ ಸಾನಿಧ್ಯದ ಧರ್ಮದರ್ಶಿ ಮನೋಜ್ ಕಟ್ಟೆಮಾರ್, ಶಾಸಕ ಹರೀಶ್ ಪೂಂಜ, ಮಂಗಳೂರು ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂರ್ಡಾಕರ್, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಂ ಬಿ., ಸಹಿತ ಮತ್ತಿರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಜಾಲತಾಣದ ಶರತ್ ಕೆ ಎಸ್ ಬೆಳ್ತಂಗಡಿ, ಘಟಕದ ಸಂಚಾಲಕ ಗಿರೀಶ್ ಉಪಸ್ಥಿತರಿದ್ದರು.

Related posts

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya
error: Content is protected !!