September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಪ್ರಕರಣಗಳ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಫೆ.10ರಂದು ತಾಲೂಕು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಕಳೆದ ಒಂದಷ್ಟು ದಿನಗಳಿಂದ ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದೆ. ಈಗಾಗಲೆ ಕಳೆದ 20 ದಿನಗಳ ಹಿಂದೆ ಬೆಳ್ತಂಗಡಿಯ ಸಂಭೋಳ್ಯ ಎಂಬಲ್ಲಿ ಸುಮಂತ್ ಎಂಬ ವಿದ್ಯಾರ್ಥಿಯ ಹತ್ಯೆಯಾಗಿದ್ದು ಈ ಪ್ರಕರಣದಲ್ಲೂ ಯಾವುದೇ ಆರೋಪಿಗಳು ಪತ್ತೇಯಾಗದೆ ಇರುವುದು ವಿಷಾದಕರ ಸಂಗತಿ. ಜೊತೆಗೆ ಫೆ.9 ರಂದು ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಮುಸುಕುಧಾರಿಗಳು ನಡೆಸಿರುವ ಹಲ್ಲೆ ಪ್ರಕರಣ ತಾಲೂಕಿನ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿರುವುದಲ್ಲದೆ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಈ ಎಲ್ಲಾ ಪ್ರಕರಣಗಳ ಗಂಭೀರತೆಯನ್ನು ಅರಿತು, ಉನ್ನತ ಮಟ್ಟದ ತನಿಖಾ ತಂಡಕ್ಕೆ ನೀಡಿ ಆರೋಪಿಗಳನ್ನ ಕೂಡಲೇ ಪತ್ತೆಹಚ್ಚಿವುದರೊಂದಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದರು.

ಬಳಿಕ ಬೆಳ್ತಂಗಡಿ ತಹಶೀಲ್ದಾರ್ ರವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ್ ನಿಶಾಂತ್, ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಆಕಾಶ್, ಶಿವಪ್ರಸಾದ್, ಸಾರ್ಥಕ್ ಮತ್ತಿತರರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya
error: Content is protected !!