25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿ

ಕೊಂಡ ಗಾಯ (Self inflicted wound) ಎಂದು ಕಂಡು ಬಂದಿದೆ.
ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿ ಮತ್ತೋಂದು ಹೇಳಿಕೆ ನೀಡಿದ್ದಾಳೆ.
ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸ ಲಾಗುವುದು. ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!