25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!