22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!