September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಡಿಸಿ ಮನ್ನಾ ಜಮೀನು ಹಂಚಿಕೆ,: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಹಾಗೂ ಸಚಿವ ಯು.ಟಿ ಖಾದರ್ ರವರನ್ನು ಭೇಟಿಯಾದ ದಲಿತ ನಾಯಕರು

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಬಡಗಕಾರಂದೂರು ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya
error: Content is protected !!