23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು ಕಥೆ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂಬ ವದಂತಿ ಹಬ್ಬಿದೆ.
ಸುದೇಮುಗೇರು ಸಮೀಪದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲೆಂದು ನಿನ್ನೆ ಬೆಳಿಗ್ಗೆ ಸುಮಾರು 8.45ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಸುದೇಮುಗೇರು ಸಮೀಪ ರಸ್ತೆ ತಿರುವಿನಲ್ಲಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಎಳೆದೊಯ್ಯಲು ಯತ್ನಿಸಿದರೆನ್ನಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ತೋರಿದಾಗ ಮುಸುಕುಧಾರಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್ ಸವಾರ ಹಾರ್ನ್ ಮಾಡಿದ್ದನ್ನು ಕೇಳಿಸಿಕೊಂಡ ತಂಡ ಅಲ್ಲಿಂದ ಪರಾರಿಯಾಯಿಂತೆಂದು ಗಾಯಾಳು ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದರು.

ಇದೀಗ ಪ್ರಕರಣ ಹೊಸ ತಿರುವುವನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿನಿಗೆ ಕಾಲೇಜಿಗೆ ಹೋಗಲು ಇಷ್ಟವಿರಲಿಲ್ಲ. ಇದಕ್ಕಾಗಿ ವಿದ್ಯಾರ್ಥಿನಿ ಈ ಕಟ್ಟುಕತೆಯನ್ನು ಕಟ್ಟಿ, ಬ್ಲೆಡ್ ನಿಂದ ಕೈಗೆ ಗೀರಿ ಕೊಂಡಿದ್ದಳು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಇಲಾಖೆ ಇನ್ನಷ್ಟೇ ಸ್ವಷ್ಟ ಮಾಹಿತಿ ನೀಡಬೇಕಾಗಿದೆ.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!