25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಪ್ರಾರಂಭಗೊಂಡು ಫೆ.12 ರವರೆಗೆ ಜರುಗಲಿದೆ.

ಫೆ.8 ರಂದು ಬೆಳಿಗ್ಗೆ ಶ್ರೀ ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನಪೂಜೆ ಸಂಜೆ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರಿಂದ ಲಂಕಾದಹನ ಯಕ್ಷಗಾನ, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ನಿತ್ಯ ಬಲಿ ನಡೆಯಿತು.

ಫೆ.9ರಂದು ಬೆಳಿಗ್ಗೆ ಶ್ರೀದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ರಾಮ ಭಜನಾ ಮಂಡಳಿ ಮಲೆಬೆಟ್ಟು-ಇವರ ನೇತೃತ್ವದಲ್ಲಿ ಆಹ್ವಾನಿತ ಭಜನಾ ಮಂಡಳಿಗಳಿಂದ ‘ಕಮ್ಮಟ ಭಜನೋತ್ಸವ’, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಿತು.

ಇಂದು( ಫೆ.10) ಬೆಳಿಗ್ಗೆ ಕವಾಟ ಉದ್ಘಾಟನಾ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪಲ್ಲಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಗಣೇಶ್ ಕಾಂತಾಜೆ , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ಆಚಾರ್ಯ ಗುಂಡಿಜಾಲು, ಪ್ರಧಾನ ಅರ್ಚಕ ಅಶೋಕ್ ಕುಮಾರ್ ಕೊಯ್ಯೂರು, ಅರ್ಚಕರಾದ ಗೋಪಾಲ ಉಡುಪ, ರಾಘವೇಂದ್ರ ಉಡುಪ, ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಕಳೆಂಜ ಮೂಲಸ್ಥಾನದಿಂದ ಭಂಡಾರದ ಆಗಮನ, ರಾತ್ರಿ ಸ.ಉ.ಹಿ.ಪ್ರಾ.ಶಾಲೆ ಕೊಯ್ಯೂರು ಇಲ್ಲಿಯ ವಿದ್ಯಾರ್ಥಿಗಳಿಂದ ‘ನೃತ್ಯ ವೈವಿಧ್ಯ’, ಶ್ರೀ ದೇವಿಯ ಉತ್ಸವ, ಕೆರೆಕಟ್ಟೆ ಪೂಜೆ, ಅವಭೃತ, ಧ್ವಜಾವರೋಹಣ, ಪ್ರಸನ್ನ ಪೂಜೆ, ಶ್ರೀ ಧರ್ಮದೈವಗಳ ನೇಮೋತ್ಸವ ಶ್ರೀ ಧರ್ಮದೈವ ವಾರಾಹಿ, ಶ್ರೀ ಧೂಮಾವತಿ ನೇಮೋತ್ಸವ, ಶ್ರೀ ಕೊಡಮಣಿತ್ತಾಯ ಸಹಿತ ಧರ್ಮದೈವಗಳ ನೇಮೋತ್ಸವ ಜರುಗುವುದು.

Related posts

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya
error: Content is protected !!