22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

ಕಾಶಿಪಟ್ಣ: ಚಿನ್ನದ ಬೆಲೆ ಗಗನಕ್ಕೇರಿದೆ. ಇದರೊಂದಿಗೆ ಸರ ಕಳ್ಳತನ ಪ್ರಕರಣವು ಚುರುಕುಗೊಂಡಿದೆ. ದಿನದಿಂದ ದಿನಕ್ಕೆ ಚಿನ್ನದ ದರ ಏರಿಕೆಯಾಗುತ್ತಿದ್ದಂತೆ ಕಾಶಿಪಟ್ಣದಲ್ಲಿ ಖದೀಮನೊಬ್ಬ ತನ್ನ ಕೈಚಳಕ ಪ್ರಯೋಗಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಬಗ್ಗೆ ವರದಿಯಾಗಿದೆ.

ಕಾಶಿಪಟ್ಣ ಗ್ರಾಮದ ಶಿವಗಿರಿ ಎಂಬಲ್ಲಿ ಮನೆಯೊಂದಕ್ಕೆ ಭೇಟಿ ನೀಡಿದ ಕಳ್ಳ ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾಗ ಮಹಿಳೆಯೊಬ್ಬರು ಸರವನ್ನು ಆತನ ಕೈಗೆ ನೀಡುತ್ತಿದ್ದಂತೆ ಅದನ್ನು ಹಿಡಿದುಕೊಂಡು ಆತ ಪರಾರಿಯಾದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅದೇ ಪರಿಸರ ಮತ್ತೊಂದು ಮನೆಗೆ ಭೇಟಿ ನೀಡುತ್ತಿರುವ ಖದೀಮನ ದೃಷ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈತ ಕಂಡುಬಂದಲ್ಲಿ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

Related posts

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya
error: Content is protected !!