22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಕಲ್ಮಂಜ : ಧರ್ಮಸ್ಥಳ-ಮುಂಡಾಜೆ ಸಂಪರ್ಕ ರಸ್ತೆಯ ಕಲ್ಮಂಜ ಗ್ರಾಮದ ಕೊತ್ತಲಿಗೆ, ಒಂಜರೆಬೈಲು ಹಾಗೂ ಪಿಲತ್ತಡ್ಕದಲ್ಲಿ ಒಟ್ಟು 3 ನೂತನ ಸೇತುವೆ ನಿರ್ಮಾಣಕ್ಕೆ ರೂ. 3.75 ಅನುದಾನವನ್ನು ಒದಗಿಸಿ, ಇಂದು ಮೂರೂ ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ಶ್ರಮ ವಹಿಸುತ್ತಿದ್ದೇನೆ. ಧರ್ಮಸ್ಥಳ ಮುಂಡಾಜೆ ರಸ್ತೆಯು ಅತ್ಯಂತ ಪ್ರಮುಖ ರಸ್ತೆಗಳಲ್ಲೊಂದಾಗಿದ್ದು, ಈಗಾಗಲೇ 3 ನೂತನ ಸೇತುವೆ ನಿರ್ಮಾಣಕ್ಕೆ ರೂ. 3.75 ಕೋಟಿ ಅನುದಾನ ಮೀಸಲಿರಿಸಿ, ಶಿಲನ್ಯಾಸ ನೆರವೇರಿಸಲಾಗಿದೆ. ಆದಷ್ಟು ಶೀಘ್ರವೇ ನೂತನ ಸೇತುವೆಗಳ ನಿರ್ಮಾಣವಾಗುತ್ತದೆ ಎಂದು ಭರವಸೆ ನೀಡಿದರು. ಸೇತುವೆ ನಿರ್ಮಾಣ ಕಾರ್ಯದ ಸಂದರ್ಭದಲ್ಲಿ ಸ್ಥಳೀಯರು ಸಂಪೂರ್ಣ ಸಹಕಾರ ನೀಡಬೇಕಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸ್ಥಳೀಯರಾದ ಶ್ರೀನಿವಾಸ್ ರಾವ್ ಅವರು, ಶಾಸಕರು ಗ್ರಾಮಸ್ಥರ ಬೇಡಿಕೆಗಳಿಗೆ ತಕ್ಷಣವೇ ಸ್ಪಂದಿಸುತ್ತಿದ್ದಾರೆ. ಮುಂಡಾಜೆ ಹಾಗೂ ಕಲ್ಮಂಜ ಗ್ರಾಮಸ್ಥರ ಬಹುಬೇಡಿಕೆಯ ಮೂರು ಸೇತುವೆಗಳನ್ನು ಅಭಿವೃದ್ಧಿಗೊಳಿಸುತ್ತಿರುವುದು ಸಂತಸ ತಂದಿದೆ. ಅಲ್ಲದೆ, ಎರಡು ಭಾಗವಾಗಿದ್ದ ಕಲ್ಮಂಜ ಗ್ರಾಮವನ್ನು ಪಜಿರಡ್ಕದಲ್ಲಿ ಕಿಂಡಿ ಅಣೆಕಟ್ಟು ಸಹಿತ ಬೃಹತ್ ಸೇತುವೆ ನಿರ್ಮಾಣದ ಮೂಲಕ ಒಂದು ಮಾಡಿದ್ದಾರೆ. ತಾಲೂಕಿನ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇಂತಹ ಶಾಸಕರನ್ನು ಪಡೆದ ನಾವೇ ಪುಣ್ಯವಂತರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ ಆರ್. ಸಾಲ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ವಿಮಲ, ಗ್ರಾ ಕಾರ್ಯದರ್ಶಿ ಸರೋಜಿನಿ, ಗ್ರಾಮ ಪಂಚಾಯತ್ ಸದಸ್ಯರು, ಬೂತ್ ಬಿಜೆಪಿ ಅಧ್ಯಕ್ಷರಾದ ಅನಿಲ್ ಗೌಡ, ಸ್ಥಳೀಯರಾದ ಸುಬ್ರಹ್ಮಣ್ಯ ಹೆಬ್ಬಾರ್, ಶ್ರೀನಿವಾಸ್ ರಾವ್, ದೇವಪ್ಪ ಆಚಾರಿ, ಪ್ರದೀಪ್ ಚಿಪ್ಳೂಣ್ ಕರ್, ಇಂಜಿನಿಯರ್, ಗುತ್ತಿಗೆದಾರರು ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Related posts

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!