37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಾಲ್ಕು ವರ್ಷದ ಪ್ರಜ್ಞಾ ರವರು ಎಂಡೋಸಲ್ಫಾನ್ ನಿಂದ ಬಳಲುತಿದ್ದು ಆರೋಗ್ಯದ ನೆರವಿಗಾಗಿ ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ ಏಕಕಾಲದಲ್ಲಿ ಪೆನ್ನು ಮಾರಿ ಅದರಲ್ಲಿ ಬಂದ ಹಣವನ್ನು ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಫೆ. 16ರಂದು ನಡೆಯಲಿದೆ ಎಂದು ರಾಜಕೇಸರಿ ಸಂಸ್ಥಾಪಕ ದೀಪಕ್ ಹೇಳಿದರು. ಅವರು ಮಂಗಳವಾರ ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ಹತ್ತು ರೂಪಾಯಿ ಮೌಲ್ಯದ ಪೆನ್ನು ಮಾರಾಟ ಮಾಡಿ ಅದರಲ್ಲಿ ಬಂದ ಲಾಭಾಂಶವನ್ನು ಆರೋಗ್ಯದ ನೇರವಿಗಾಗಿ ಕುಟುಂಬಕ್ಕೆ ಹಸ್ತಂತಾರಿಸಲಾಗುವುದು. ಬೆಳ್ತಂಗಡಿ ಬಸ್‌ನಿಲ್ದಾಣ, ಉಜಿರೆ, ಗುರುವಾಯನಕೆರೆ ಪರಿಸರದಲ್ಲಿ ಸಂಘಟನೆ ಸದಸ್ಯರು ಈ ಕಾರ್ಯಕ್ರಮ ನಡೆಸಲಿದ್ದಾರೆ. ಕಟ್ಟೆಮಾರ್ ಮಂತ್ರದೇವಾತ ಸಾನಿಧ್ಯದ ಧರ್ಮದರ್ಶಿ ಮನೋಜ್ ಕಟ್ಟೆಮಾರ್, ಶಾಸಕ ಹರೀಶ್ ಪೂಂಜ, ಮಂಗಳೂರು ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂರ್ಡಾಕರ್, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಂ ಬಿ., ಸಹಿತ ಮತ್ತಿರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಜಾಲತಾಣದ ಶರತ್ ಕೆ ಎಸ್ ಬೆಳ್ತಂಗಡಿ, ಘಟಕದ ಸಂಚಾಲಕ ಗಿರೀಶ್ ಉಪಸ್ಥಿತರಿದ್ದರು.

Related posts

ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮರುತನಿಖೆ ನಡೆಸುವಂತೆ ತಾ| ಮಹಿಳಾ ಮಂಡಲ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya
error: Content is protected !!