25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಪ್ರಕರಣಗಳ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಫೆ.10ರಂದು ತಾಲೂಕು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಕಳೆದ ಒಂದಷ್ಟು ದಿನಗಳಿಂದ ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದೆ. ಈಗಾಗಲೆ ಕಳೆದ 20 ದಿನಗಳ ಹಿಂದೆ ಬೆಳ್ತಂಗಡಿಯ ಸಂಭೋಳ್ಯ ಎಂಬಲ್ಲಿ ಸುಮಂತ್ ಎಂಬ ವಿದ್ಯಾರ್ಥಿಯ ಹತ್ಯೆಯಾಗಿದ್ದು ಈ ಪ್ರಕರಣದಲ್ಲೂ ಯಾವುದೇ ಆರೋಪಿಗಳು ಪತ್ತೇಯಾಗದೆ ಇರುವುದು ವಿಷಾದಕರ ಸಂಗತಿ. ಜೊತೆಗೆ ಫೆ.9 ರಂದು ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಮುಸುಕುಧಾರಿಗಳು ನಡೆಸಿರುವ ಹಲ್ಲೆ ಪ್ರಕರಣ ತಾಲೂಕಿನ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿರುವುದಲ್ಲದೆ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಈ ಎಲ್ಲಾ ಪ್ರಕರಣಗಳ ಗಂಭೀರತೆಯನ್ನು ಅರಿತು, ಉನ್ನತ ಮಟ್ಟದ ತನಿಖಾ ತಂಡಕ್ಕೆ ನೀಡಿ ಆರೋಪಿಗಳನ್ನ ಕೂಡಲೇ ಪತ್ತೆಹಚ್ಚಿವುದರೊಂದಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದರು.

ಬಳಿಕ ಬೆಳ್ತಂಗಡಿ ತಹಶೀಲ್ದಾರ್ ರವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ್ ನಿಶಾಂತ್, ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಆಕಾಶ್, ಶಿವಪ್ರಸಾದ್, ಸಾರ್ಥಕ್ ಮತ್ತಿತರರು ಉಪಸ್ಥಿತರಿದ್ದರು.

Related posts

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya
error: Content is protected !!