ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಹೈಕೋರ್ಟ್ ನ್ಯಾಯಾಧೀಶರಾದ ನರೇಂದ್ರ ಪ್ರಸಾದ್ ರನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ ಮತ್ತು ಬೆಳ್ತಂಗಡಿ ವಕೀಲರ ಸಂಘ, ಮಂಗಳೂರು ವಕೀಲರ ಸಂಘ, ಬಂಟ್ವಾಳ ವಕೀಲರ ಸಂಘ ಮತ್ತು ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷರು / ಪದಾಧಿಕಾರಿಗಳು ಹೈಕೋರ್ಟ್ ನ್ಯಾಯವಾದಿ ಪಿ ಪಿ ಹೆಗ್ಡೆ ಯವರ ಜೊತೆ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಕೀಲರ, ವಕೀಲರ ಭವನ ಮತ್ತು ನ್ಯಾಯಾಲಯಗಳ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಲಾಯಿತು.

ಈ ಬಗ್ಗೆ ಆಡಳಿತಾತ್ಮಕ ನ್ಯಾಯಾಧೀಶರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಸಂಘಟಿತವಾಗಿ ಚರ್ಚಿಸಿದ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಲ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಹಾಗೂ ಎಲ್ಲಾ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಹೊಳೆಯಂತಾದ ರಾಷ್ಟ್ರೀಯ ಹೆದ್ದಾರಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಸಂಭ್ರಮದ ಕುಟುಂಬ ಕಲೋತ್ಸವ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!