23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 46 ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಫೆ.15 ರಂದು ಮುಕ್ತಾಯಗೊಳ್ಳಲಿದೆ. ಆದ್ದರಿಂದ ಆಡಳಿತಾಧಿಕಾರಿಗಳನ್ನು ಆಯಾ ಆಯಾ ಗ್ರಾಮ ಪಂಚಾಯತ್‌ಗಳಿಗೆ ನೇಮಿಸಲಾಗಿದೆ. ಅವಧಿ ಮುಗಿದ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.

ಕಾಶಿಪಟ್ಣ, ಮರೋಡಿ ಹಾಗೂ ನಾರಾವಿಗೆ ಎಪಿಎಂಸಿ ಕಾರ್ಯದರ್ಶಿ ನವೀನ್ ಕುಮಾರ್, ಹೊಸಂಗಡಿ ಹಾಗೂ ಕುಕ್ಕೇಡಿಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ ಹೆಚ್, ತೆಕ್ಕಾರು ಹಾಗೂ ಬಾರ್ಯಗೆ ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್.ಚಂದ್ರಶೇಖರ್, ತಣ್ಣೀರುಪಂತ ಮತ್ತು ಇಳಂತಿಲಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯ್ ಕುಮಾರ್, ಕಳಿಯ ಹಾಗೂ ಮಾಲಾಡಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್., ಪಡಂಗಡಿ ಹಾಗೂ ಬಳಂಜಗೆ ಬೆಳ್ತಂಗಡಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ನೆರಿಯ ಹಾಗೂ ಚಾರ್ಮಾಡಿಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿಎಸ್, ಪುದುವೆಟ್ಟು-ಕಳಂಜಗೆ ಕಳಂಜೊಟ್ಟು ಪಶುಸಂಗೋಪನಾ ಇಲಾಖೆ ಪಶುವೈದ್ಯಾಧಿಕಾರಿ ಡಾ.ಯತೀಶ್, ಶಿಶಿಲ, ಶಿಬಾಜೆ ಹಾಗೂ ಅರಸಿನಮಕ್ಕಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ನಾವೂರು ಮತ್ತು ಇಂದಬೆಟ್ಟುವಿಗೆ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜನಾರ್ಧನ್,

ಮೇಲತಂಬೆಟ್ಟು-ಲಾಯಿಲಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರಕೃಷ್ಣ, ಧರ್ಮಸ್ಥಳ ಮತ್ತು ಉಜಿರೆಗೆ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಮಹಾವೀರ ಜೈನ್, ಸುಲ್ಕೇರಿ ಮತ್ತು ಅಳದಂಗಡಿಗೆ ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಮೋಹನ್ ಕುಮಾರ್, ಮುಂಡಾಜೆ ಹಾಗೂ ಕಲ್ಮಂಜಕ್ಕೆ ಬೆಳ್ತಂಗಡಿ ಪಶುಸಂಗೋಪನಾ ವೈದ್ಯಾಧಿಕಾರಿ(ಆಡಳಿತ) ಡಾ.ರವಿಕುಮಾರ್, ಮಚ್ಚಿನ-ಮಡಂತ್ಯಾರಿಗೆ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಲೋಕೇಶ್, ಕೊಯ್ಯೂರು ಮತ್ತು ಕುವೆಟ್ಟುವಿಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್, ಮಲವಂತಿಗೆ ಮತ್ತು ಕಡಿರುದ್ಯಾವರಕ್ಕೆ ಬೆಳ್ತಂಗಡಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ, ಅಂಡಿAಜೆ ಮತ್ತು ಶಿರ್ಲಾಲುವಿಗೆ ಮದ್ದಡ್ಕ ಸಹಾಯಕ ತೋಟಗಾರಿಕಾ ನಿರ್ದೇಶಕ ಮಂಜುನಾಥ, ಕಣಿಯೂರು ಹಾಗೂ ಬಂದಾರಿಗೆ ಕಣಿಯೂರು ಸರ್ಕಾರಿ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಹನಾ ರೈ, ಬೆಳಾಲು ಮತ್ತು ನಿಡ್ಲೆಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎ.ಡಿ.ವೀರಭದ್ರಪ್ಪ, ಪಟ್ರಮೆ-ಕೊಕ್ಕಡಗೆ ತಣ್ಣೀರುಪಂತ ಸರ್ಕಾರಿ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೃಷ್ಣಪ್ರಸಾದ್ ಹಾಗೂ ಕೊನೆಯದಾಗಿ ನಡ ಮತ್ತು ಮಿತ್ತಬಾಗಿಲಿಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಮೇಶ್ ಸಿ.ಕೆ ಅವರನ್ನು ಆಡಳಿತಾಧಿಕಾರಿಗಳಾಗಿ ಆಯಾ ಆಯಾ ಗ್ರಾಮ ಪಂಚಾಯತ್‌ಗಳಿಗೆ ನೇಮಿಸಲಾಗಿದೆ.

Related posts

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!