September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 46 ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಫೆ.15 ರಂದು ಮುಕ್ತಾಯಗೊಳ್ಳಲಿದೆ. ಆದ್ದರಿಂದ ಆಡಳಿತಾಧಿಕಾರಿಗಳನ್ನು ಆಯಾ ಆಯಾ ಗ್ರಾಮ ಪಂಚಾಯತ್‌ಗಳಿಗೆ ನೇಮಿಸಲಾಗಿದೆ. ಅವಧಿ ಮುಗಿದ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.

ಕಾಶಿಪಟ್ಣ, ಮರೋಡಿ ಹಾಗೂ ನಾರಾವಿಗೆ ಎಪಿಎಂಸಿ ಕಾರ್ಯದರ್ಶಿ ನವೀನ್ ಕುಮಾರ್, ಹೊಸಂಗಡಿ ಹಾಗೂ ಕುಕ್ಕೇಡಿಗೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ ಹೆಚ್, ತೆಕ್ಕಾರು ಹಾಗೂ ಬಾರ್ಯಗೆ ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಕೆ.ಎಸ್.ಚಂದ್ರಶೇಖರ್, ತಣ್ಣೀರುಪಂತ ಮತ್ತು ಇಳಂತಿಲಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯ್ ಕುಮಾರ್, ಕಳಿಯ ಹಾಗೂ ಮಾಲಾಡಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್., ಪಡಂಗಡಿ ಹಾಗೂ ಬಳಂಜಗೆ ಬೆಳ್ತಂಗಡಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ನೆರಿಯ ಹಾಗೂ ಚಾರ್ಮಾಡಿಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿಎಸ್, ಪುದುವೆಟ್ಟು-ಕಳಂಜಗೆ ಕಳಂಜೊಟ್ಟು ಪಶುಸಂಗೋಪನಾ ಇಲಾಖೆ ಪಶುವೈದ್ಯಾಧಿಕಾರಿ ಡಾ.ಯತೀಶ್, ಶಿಶಿಲ, ಶಿಬಾಜೆ ಹಾಗೂ ಅರಸಿನಮಕ್ಕಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ನಾವೂರು ಮತ್ತು ಇಂದಬೆಟ್ಟುವಿಗೆ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜನಾರ್ಧನ್,

ಮೇಲತಂಬೆಟ್ಟು-ಲಾಯಿಲಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರಕೃಷ್ಣ, ಧರ್ಮಸ್ಥಳ ಮತ್ತು ಉಜಿರೆಗೆ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಮಹಾವೀರ ಜೈನ್, ಸುಲ್ಕೇರಿ ಮತ್ತು ಅಳದಂಗಡಿಗೆ ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಮೋಹನ್ ಕುಮಾರ್, ಮುಂಡಾಜೆ ಹಾಗೂ ಕಲ್ಮಂಜಕ್ಕೆ ಬೆಳ್ತಂಗಡಿ ಪಶುಸಂಗೋಪನಾ ವೈದ್ಯಾಧಿಕಾರಿ(ಆಡಳಿತ) ಡಾ.ರವಿಕುಮಾರ್, ಮಚ್ಚಿನ-ಮಡಂತ್ಯಾರಿಗೆ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಲೋಕೇಶ್, ಕೊಯ್ಯೂರು ಮತ್ತು ಕುವೆಟ್ಟುವಿಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್, ಮಲವಂತಿಗೆ ಮತ್ತು ಕಡಿರುದ್ಯಾವರಕ್ಕೆ ಬೆಳ್ತಂಗಡಿ ವನ್ಯಜೀವಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ, ಅಂಡಿAಜೆ ಮತ್ತು ಶಿರ್ಲಾಲುವಿಗೆ ಮದ್ದಡ್ಕ ಸಹಾಯಕ ತೋಟಗಾರಿಕಾ ನಿರ್ದೇಶಕ ಮಂಜುನಾಥ, ಕಣಿಯೂರು ಹಾಗೂ ಬಂದಾರಿಗೆ ಕಣಿಯೂರು ಸರ್ಕಾರಿ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಹನಾ ರೈ, ಬೆಳಾಲು ಮತ್ತು ನಿಡ್ಲೆಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎ.ಡಿ.ವೀರಭದ್ರಪ್ಪ, ಪಟ್ರಮೆ-ಕೊಕ್ಕಡಗೆ ತಣ್ಣೀರುಪಂತ ಸರ್ಕಾರಿ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೃಷ್ಣಪ್ರಸಾದ್ ಹಾಗೂ ಕೊನೆಯದಾಗಿ ನಡ ಮತ್ತು ಮಿತ್ತಬಾಗಿಲಿಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಮೇಶ್ ಸಿ.ಕೆ ಅವರನ್ನು ಆಡಳಿತಾಧಿಕಾರಿಗಳಾಗಿ ಆಯಾ ಆಯಾ ಗ್ರಾಮ ಪಂಚಾಯತ್‌ಗಳಿಗೆ ನೇಮಿಸಲಾಗಿದೆ.

Related posts

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!