25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

ಉಜಿರೆ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ತರಬೇತಿ ಬಗ್ಗೆ ಉಜಿರೆ ಗ್ರಾಮದ ಕಿರಿಯಾಡಿ ಸದಾಶಿವ ದೇವಸ್ಥಾನದಲ್ಲಿ ನಡೆಯಿತು.

ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕರಾದ ಕೃಷ್ಣ ಹೊಳ್ಳ ನೆರವೇರಿಸಿ ಮಾತನಾಡಿ ರೈತ ತರಬೇತಿ ಒಂದು ಬಹಳ ಉತ್ತಮವಾದ ಯೋಜನೆ ಇದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.

ಪ್ರಸ್ತಾವಿಕವಾಗಿ ಮಾತನಾಡಿದ ಕೃಷಿ ಸಖಿ ಭಾಗೀರಥಿ ರೈತ ತರಬೇತಿಯ ಉದ್ದೇಶಗಳು ಇಲಾಖೆಯ ವತಿಯಿಂದ ನಡೆಯುವ ವಿವಿಧ ತರಬೇತಿಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ರೈತರಿಗೆ ಮಾಹಿತಿ ನೀಡಿದರು. ಪಶುಸಖಿ ಏಕಲತಾ ಪಶು ಇಲಾಖೆಯ ಮಾಹಿತಿಯನ್ನು ನೀಡಿದರು. ಮುಂದೆ ಸಂಪನ್ಮೂಲ ವ್ಯಕ್ತಿಗಳಾದ ಸುಲೇಮಾನ್ ಅಣಬೆ ಕೃಷಿ ಮಾಡುವ ವಿಧಾನಗಳು ಅದರ ಉದ್ದೇಶ ಅದರಿಂದ ನಮಗಾಗುವ ಲಾಭಗಳು ಪ್ರಾತ್ಯಕ್ಷಿಕೆಯ ಮೂಲಕ ಬಂದ ಎಲ್ಲಾ ರೈತರಿಗೆ ಸವಿವರವಾಗಿ ತಿಳಿಸಿದರು.

ಶಿಕ್ಷಕಿ ಸೇವಂತಿ ನಿರಂಜನ್ ಸ್ವಾಗತಿಸಿದರು. , ಶಿಕ್ಷಕಿ ರಾಜೇಶ್ವರಿ ಚಂದ್ರಕಾಂತ್ ಧನ್ಯವಾದವಿತ್ತರು.

Related posts

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya
error: Content is protected !!