23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

ಬೆಳ್ತಂಗಡಿ: ಇಲ್ಲಿಯ ಜೂನಿಯರ್ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿ, ಚೂರಿಯಿಂದ ತಿವಿದ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಇದೊಂದು ಕಟ್ಟು ಕಥೆ ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂಬ ವದಂತಿ ಹಬ್ಬಿದೆ.
ಸುದೇಮುಗೇರು ಸಮೀಪದ ವಿದ್ಯಾರ್ಥಿನಿ ಕಾಲೇಜಿಗೆ ಹೋಗಲೆಂದು ನಿನ್ನೆ ಬೆಳಿಗ್ಗೆ ಸುಮಾರು 8.45ಕ್ಕೆ ತನ್ನ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಬೆಳ್ತಂಗಡಿ ಜೂನಿಯರ್ ಕಾಲೇಜಿನ ಹಿಂಭಾಗದಲ್ಲಿ ಸುದೇಮುಗೇರು ಸಮೀಪ ರಸ್ತೆ ತಿರುವಿನಲ್ಲಿ ಕಾರಿನಲ್ಲಿ ಬಂದ ಮೂರು ಮಂದಿ ಮುಸುಕುಧಾರಿಗಳ ತಂಡ ದ್ವಿಚಕ್ರವಾಹವನ್ನು ತಡೆಗಟ್ಟಿ ವಿದ್ಯಾರ್ಥಿನಿಯನ್ನು ಎಳೆದೊಯ್ಯಲು ಯತ್ನಿಸಿದರೆನ್ನಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ತೋರಿದಾಗ ಮುಸುಕುಧಾರಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್ ಸವಾರ ಹಾರ್ನ್ ಮಾಡಿದ್ದನ್ನು ಕೇಳಿಸಿಕೊಂಡ ತಂಡ ಅಲ್ಲಿಂದ ಪರಾರಿಯಾಯಿಂತೆಂದು ಗಾಯಾಳು ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು, ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದರು.

ಇದೀಗ ಪ್ರಕರಣ ಹೊಸ ತಿರುವುವನ್ನು ಪಡೆದುಕೊಂಡಿದ್ದು, ವಿದ್ಯಾರ್ಥಿನಿಗೆ ಕಾಲೇಜಿಗೆ ಹೋಗಲು ಇಷ್ಟವಿರಲಿಲ್ಲ. ಇದಕ್ಕಾಗಿ ವಿದ್ಯಾರ್ಥಿನಿ ಈ ಕಟ್ಟುಕತೆಯನ್ನು ಕಟ್ಟಿ, ಬ್ಲೆಡ್ ನಿಂದ ಕೈಗೆ ಗೀರಿ ಕೊಂಡಿದ್ದಳು ಎಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಪೊಲೀಸ್ ಇಲಾಖೆ ಇನ್ನಷ್ಟೇ ಸ್ವಷ್ಟ ಮಾಹಿತಿ ನೀಡಬೇಕಾಗಿದೆ.

Related posts

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya
error: Content is protected !!