25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ. 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕೊಕ್ಕಡ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.09ರಂದು ಕೊಕ್ಕಡದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕಿನ ಗೌರವ ಸಲಹೆಗಾರರು ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕ ಇಲ್ಲಿಯ ಆಡಳಿತ ಸಮಿತಿಯ ಸದಸ್ಯರೂ, ಉಜಿರೆ ಮೂರ್ತೆದಾರರ ಸಂಘದ ಅಧ್ಯಕ್ಷ ವಿಶ್ವನಾಥ್ ಕೊಲ್ಲಾಜೆ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸಂಚಾಲಕ ರೂಪೇಶ್ ಕೆ ಧರ್ಮಸ್ಥಳ, ಪುದುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷ , ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಲಯ ಸಂಚಾಲಕ ಪೂರ್ಣಕ್ಷ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಕೆ ಜೆ, ಕಾರ್ಯದರ್ಶಿಯಾದ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಶ್ವನಾಥ್ ಕೊಲ್ಲಾಜೆ ಸಂಯೋಜಿಸಿದರು.

Related posts

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!