September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಪ್ರಾರಂಭಗೊಂಡು ಫೆ.12 ರವರೆಗೆ ಜರುಗಲಿದೆ.

ಫೆ.8 ರಂದು ಬೆಳಿಗ್ಗೆ ಶ್ರೀ ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ಪ್ರಸನ್ನಪೂಜೆ ಸಂಜೆ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ಯಕ್ಷಗಾನ ಕಲಾಸಂಘ ಮತ್ತು ಅತಿಥಿ ಕಲಾವಿದರಿಂದ ಲಂಕಾದಹನ ಯಕ್ಷಗಾನ, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ನಿತ್ಯ ಬಲಿ ನಡೆಯಿತು.

ಫೆ.9ರಂದು ಬೆಳಿಗ್ಗೆ ಶ್ರೀದೇವಿ ಉತ್ಸವ, ದರ್ಶನ ಬಲಿ, ಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ರಾಮ ಭಜನಾ ಮಂಡಳಿ ಮಲೆಬೆಟ್ಟು-ಇವರ ನೇತೃತ್ವದಲ್ಲಿ ಆಹ್ವಾನಿತ ಭಜನಾ ಮಂಡಳಿಗಳಿಂದ ‘ಕಮ್ಮಟ ಭಜನೋತ್ಸವ’, ರಾತ್ರಿ ಶ್ರೀ ರಂಗಪೂಜೆ, ಶ್ರೀದೇವಿ ಉತ್ಸವ, ಭೂತಬಲಿ, ಶಯನೋತ್ಸವ, ಕವಾಟ ಬಂಧನ ನಡೆಯಿತು.

ಇಂದು( ಫೆ.10) ಬೆಳಿಗ್ಗೆ ಕವಾಟ ಉದ್ಘಾಟನಾ, ಕಲಶಾಭಿಷೇಕ, ಪ್ರಸನ್ನ ಪೂಜೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ ಪಲ್ಲಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಗಣೇಶ್ ಕಾಂತಾಜೆ , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀಧರ ಆಚಾರ್ಯ ಗುಂಡಿಜಾಲು, ಪ್ರಧಾನ ಅರ್ಚಕ ಅಶೋಕ್ ಕುಮಾರ್ ಕೊಯ್ಯೂರು, ಅರ್ಚಕರಾದ ಗೋಪಾಲ ಉಡುಪ, ರಾಘವೇಂದ್ರ ಉಡುಪ, ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ಕಳೆಂಜ ಮೂಲಸ್ಥಾನದಿಂದ ಭಂಡಾರದ ಆಗಮನ, ರಾತ್ರಿ ಸ.ಉ.ಹಿ.ಪ್ರಾ.ಶಾಲೆ ಕೊಯ್ಯೂರು ಇಲ್ಲಿಯ ವಿದ್ಯಾರ್ಥಿಗಳಿಂದ ‘ನೃತ್ಯ ವೈವಿಧ್ಯ’, ಶ್ರೀ ದೇವಿಯ ಉತ್ಸವ, ಕೆರೆಕಟ್ಟೆ ಪೂಜೆ, ಅವಭೃತ, ಧ್ವಜಾವರೋಹಣ, ಪ್ರಸನ್ನ ಪೂಜೆ, ಶ್ರೀ ಧರ್ಮದೈವಗಳ ನೇಮೋತ್ಸವ ಶ್ರೀ ಧರ್ಮದೈವ ವಾರಾಹಿ, ಶ್ರೀ ಧೂಮಾವತಿ ನೇಮೋತ್ಸವ, ಶ್ರೀ ಕೊಡಮಣಿತ್ತಾಯ ಸಹಿತ ಧರ್ಮದೈವಗಳ ನೇಮೋತ್ಸವ ಜರುಗುವುದು.

Related posts

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ಶ್ರೀ ಕ್ಷೇ ಧ. ಗ್ರಾ. ಯೋಜನೆಯ ಜನಜಾಗೃತಿ ಗ್ರಾಮಸಮಿತಿ ಸಭೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!