25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಾಲ್ಕು ವರ್ಷದ ಪ್ರಜ್ಞಾ ರವರು ಎಂಡೋಸಲ್ಫಾನ್ ನಿಂದ ಬಳಲುತಿದ್ದು ಆರೋಗ್ಯದ ನೆರವಿಗಾಗಿ ಬೆಳ್ತಂಗಡಿ, ಉಜಿರೆ, ಗುರುವಾಯನಕೆರೆ ಏಕಕಾಲದಲ್ಲಿ ಪೆನ್ನು ಮಾರಿ ಅದರಲ್ಲಿ ಬಂದ ಹಣವನ್ನು ಕುಟುಂಬಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಫೆ. 16ರಂದು ನಡೆಯಲಿದೆ ಎಂದು ರಾಜಕೇಸರಿ ಸಂಸ್ಥಾಪಕ ದೀಪಕ್ ಹೇಳಿದರು. ಅವರು ಮಂಗಳವಾರ ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.ಹತ್ತು ರೂಪಾಯಿ ಮೌಲ್ಯದ ಪೆನ್ನು ಮಾರಾಟ ಮಾಡಿ ಅದರಲ್ಲಿ ಬಂದ ಲಾಭಾಂಶವನ್ನು ಆರೋಗ್ಯದ ನೇರವಿಗಾಗಿ ಕುಟುಂಬಕ್ಕೆ ಹಸ್ತಂತಾರಿಸಲಾಗುವುದು. ಬೆಳ್ತಂಗಡಿ ಬಸ್‌ನಿಲ್ದಾಣ, ಉಜಿರೆ, ಗುರುವಾಯನಕೆರೆ ಪರಿಸರದಲ್ಲಿ ಸಂಘಟನೆ ಸದಸ್ಯರು ಈ ಕಾರ್ಯಕ್ರಮ ನಡೆಸಲಿದ್ದಾರೆ. ಕಟ್ಟೆಮಾರ್ ಮಂತ್ರದೇವಾತ ಸಾನಿಧ್ಯದ ಧರ್ಮದರ್ಶಿ ಮನೋಜ್ ಕಟ್ಟೆಮಾರ್, ಶಾಸಕ ಹರೀಶ್ ಪೂಂಜ, ಮಂಗಳೂರು ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂರ್ಡಾಕರ್, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಂ ಬಿ., ಸಹಿತ ಮತ್ತಿರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಜಾಲತಾಣದ ಶರತ್ ಕೆ ಎಸ್ ಬೆಳ್ತಂಗಡಿ, ಘಟಕದ ಸಂಚಾಲಕ ಗಿರೀಶ್ ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya
error: Content is protected !!