July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆ ಪ್ರಕರಣಗಳ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಫೆ.10ರಂದು ತಾಲೂಕು ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಕಳೆದ ಒಂದಷ್ಟು ದಿನಗಳಿಂದ ತಾಲೂಕಿನಲ್ಲಿ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿದೆ. ಈಗಾಗಲೆ ಕಳೆದ 20 ದಿನಗಳ ಹಿಂದೆ ಬೆಳ್ತಂಗಡಿಯ ಸಂಭೋಳ್ಯ ಎಂಬಲ್ಲಿ ಸುಮಂತ್ ಎಂಬ ವಿದ್ಯಾರ್ಥಿಯ ಹತ್ಯೆಯಾಗಿದ್ದು ಈ ಪ್ರಕರಣದಲ್ಲೂ ಯಾವುದೇ ಆರೋಪಿಗಳು ಪತ್ತೇಯಾಗದೆ ಇರುವುದು ವಿಷಾದಕರ ಸಂಗತಿ. ಜೊತೆಗೆ ಫೆ.9 ರಂದು ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಮುಸುಕುಧಾರಿಗಳು ನಡೆಸಿರುವ ಹಲ್ಲೆ ಪ್ರಕರಣ ತಾಲೂಕಿನ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿರುವುದಲ್ಲದೆ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಈ ಎಲ್ಲಾ ಪ್ರಕರಣಗಳ ಗಂಭೀರತೆಯನ್ನು ಅರಿತು, ಉನ್ನತ ಮಟ್ಟದ ತನಿಖಾ ತಂಡಕ್ಕೆ ನೀಡಿ ಆರೋಪಿಗಳನ್ನ ಕೂಡಲೇ ಪತ್ತೆಹಚ್ಚಿವುದರೊಂದಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದರು.

ಬಳಿಕ ಬೆಳ್ತಂಗಡಿ ತಹಶೀಲ್ದಾರ್ ರವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ್ ನಿಶಾಂತ್, ರಾಜ್ಯ ಸಹ ಕಾರ್ಯದರ್ಶಿ ಸುವಿತ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಆಕಾಶ್, ಶಿವಪ್ರಸಾದ್, ಸಾರ್ಥಕ್ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
error: Content is protected !!