23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಹೈಕೋರ್ಟ್ ನ್ಯಾಯಾಧೀಶರಾದ ನರೇಂದ್ರ ಪ್ರಸಾದ್ ರನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ ಮತ್ತು ಬೆಳ್ತಂಗಡಿ ವಕೀಲರ ಸಂಘ, ಮಂಗಳೂರು ವಕೀಲರ ಸಂಘ, ಬಂಟ್ವಾಳ ವಕೀಲರ ಸಂಘ ಮತ್ತು ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷರು / ಪದಾಧಿಕಾರಿಗಳು ಹೈಕೋರ್ಟ್ ನ್ಯಾಯವಾದಿ ಪಿ ಪಿ ಹೆಗ್ಡೆ ಯವರ ಜೊತೆ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಕೀಲರ, ವಕೀಲರ ಭವನ ಮತ್ತು ನ್ಯಾಯಾಲಯಗಳ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಲಾಯಿತು.

ಈ ಬಗ್ಗೆ ಆಡಳಿತಾತ್ಮಕ ನ್ಯಾಯಾಧೀಶರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಸಂಘಟಿತವಾಗಿ ಚರ್ಚಿಸಿದ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಲ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಹಾಗೂ ಎಲ್ಲಾ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya
error: Content is protected !!