July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಹೈಕೋರ್ಟ್ ನ್ಯಾಯಾಧೀಶರಾದ ನರೇಂದ್ರ ಪ್ರಸಾದ್ ರನ್ನು ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ ಮತ್ತು ಬೆಳ್ತಂಗಡಿ ವಕೀಲರ ಸಂಘ, ಮಂಗಳೂರು ವಕೀಲರ ಸಂಘ, ಬಂಟ್ವಾಳ ವಕೀಲರ ಸಂಘ ಮತ್ತು ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷರು / ಪದಾಧಿಕಾರಿಗಳು ಹೈಕೋರ್ಟ್ ನ್ಯಾಯವಾದಿ ಪಿ ಪಿ ಹೆಗ್ಡೆ ಯವರ ಜೊತೆ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಕೀಲರ, ವಕೀಲರ ಭವನ ಮತ್ತು ನ್ಯಾಯಾಲಯಗಳ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಲಾಯಿತು.

ಈ ಬಗ್ಗೆ ಆಡಳಿತಾತ್ಮಕ ನ್ಯಾಯಾಧೀಶರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಸಂಘಟಿತವಾಗಿ ಚರ್ಚಿಸಿದ ಬಗ್ಗೆ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಲ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಹಾಗೂ ಎಲ್ಲಾ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya
error: Content is protected !!