24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ಬೆಳ್ತಂಗಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಹೋಗುವ ವೇಳೆ ಅಪರಿಚಿತ ಗೂಂಡಾಗಳು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಇರಿದ ಘಟನೆ ಅತ್ಯಂತ ಬೆಚ್ಚಿಬೀಳಿಸುವಂತದ್ದು. ಇದು ಹೆಣ್ಣು ಮಕ್ಕಳ ಸುರಕ್ಷತೆಯ ಮೇಲೆ ದೊಡ್ಡ ಸವಾಲು ಎತ್ತಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷೆ ಶಿನೀರ ಖಂಡಿಸಿದರು.

ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಎಪ್‌ಸ್ಟೀನ್ ಫೈಲ್ಸ್ ಮತ್ತು ನ್ಯಾಯ ಸಿಗದೇ ಉಳಿದಿರುವ ಸ್ಥಳೀಯ ಮಟ್ಟದಲ್ಲಿ ನಡೆದ ಬೆಳ್ತಂಗಡಿ ಸೌಜನ್ಯ ಪ್ರಕರಣ ಇರುವಾಗಲೇ ಹೆಣ್ಣು ಮಕ್ಕಳ ಮೇಲಿನ ಅಪಹರಣ, ದುರ್ವ್ಯವಹಾರ ಮತ್ತು ದೌರ್ಜನ್ಯಗಳ ಭೀತಿ ಇನ್ನೂ ಮುಗಿದಿಲ್ಲ ಎಂಬುದು ಈ ಘಟನೆ ಸ್ಪಷ್ಟಪಡಿಸಿದೆ ಎಂದು ಹೇಳಿದರು.


ಹಾಡುಹಗಲೇ ನಡೆದಿರುವ ಈ ಅಪಹರಣ ಯತ್ನ ಬೆಳ್ತಂಗಡಿ ಜನತೆಯಲ್ಲಿ ಗಂಭೀರ ಆತಂಕವನ್ನು ಉಂಟುಮಾಡಿದೆ. ಹೆಣ್ಣು ಮಕ್ಕಳನ್ನು ನಿರಂತರವಾಗಿ ಅಭದ್ರತೆಯ ವಾತಾವರಣಕ್ಕೆ ತಳ್ಳುವಂತಹ ಘಟನೆಗಳನ್ನು ಸಮಾಜ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿ ಅಪರಾಧಿಗಳನ್ನು ಪತ್ತೆ ಮಾಡಿ, ಅವರನ್ನು ಕಾನೂನಿನ ಮುಂದೆ ನಿಲ್ಲಿಸಿ, ಈ ಕ್ರತ್ಯದ ಹಿಂದೆ ಇರುವ ಕಾಣದ ಕೈಗಳನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಹೊರತೆಗೆದು, ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕಠಿಣ ನಿಗಾ ಮತ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಹಿಳೆಯರ ಸುರಕ್ಷತೆ ರಾಜ್ಯದ ಜವಾಬ್ದಾರಿಯಷ್ಟೇ ಅಲ್ಲ, ಸಮಾಜದ ಒಟ್ಟಾರೆ ಬದ್ಧತೆಯ ಪರೀಕ್ಷೆ ಎಂದು ಅವರು ಗಂಭೀರವಾಗಿ ಸೂಚಿಸಿದರು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya
error: Content is protected !!