July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಬಾರ್ಯ : ಬಾರ್ಯ ಶ್ರೀ ಮಹಾ ವಿಷ್ಣು ದೇವಸ್ಥಾನದ ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.

ಸಾಮೂಹಿಕ ಪ್ರಾರ್ಥನೆ ,ಹೊರೆ ಕಾಣಿಕೆ ಸಮರ್ಪಣೆ ,ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಪುತ್ತಿಲ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ , ತಾಂಬೂಲ ಕಲಾವಿದರು ಪುಂಜಾಲಕಟ್ಟೆ ತಂಡದಿಂದ ತುಳು ನಾಟಕ ,ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ತಂಡದಿಂದ ಜಾಂಬವತಿ ಕಲ್ಯಾಣ ತಾಳಮದ್ದಳೆ, ದೇವರಿಗೆ ಪಂಚ ವಿಂಶತಿ ಕಲಶಾಭಿಷೇಕ, ನಾಗತಂಬಿಲ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನ ಸಂತರ್ಪಣೆ, ಗ್ರಾಮ ದೈವ ಪಂಜುರ್ಲಿ ನೇಮೋತ್ಸವದೊಂದಿಗೆ ಜರಗಿತು.

ದೇವಳದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ, ಪ್ರಧಾನ ಅರ್ಚಕ ಗುರುಪ್ರಸಾದ ನೂರಿತ್ತಾಯ, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಉತ್ಸವ ಸಮಿತಿ ಸಂಚಾಲಕ ಯಜ್ಞೇಶ ಪುತ್ತಿಲ, ಟ್ರಸ್ಟ್ ಪದಾಧಿಕಾರಿಗಳಾದ ಪ್ರಶಾಂತ ಪೈ ಬಾರ್ಯ ,ರಾಜೇಶ್ ರಾವ್ ,ವಿದ್ಯಾ ಪ್ರಭಾಕರ, ಪ್ರಶಾಂತ ಕುಮಾರ್, ಪ್ರವೀಣ.ಯಂ, ಮನೋಹರ ಶೆಟ್ಟಿ, ನಾರಾಯಣಗೌಡ, ಶ್ರೀಮತಿ ನವೀನ, ಜಿ . ಉಮೇಶ, ಚೇತನ್ ಕುಮಾರ್ , ಶಿವರಾಮ ನಾಯ್ಕ, ಬಾಲಕೃಷ್ಣ ಶೆಟ್ಟಿ , ವಿಶ್ವನಾಥ ಗೌಡ, ವಿಜಯಲಕ್ಷ್ಮೀ ರೈ ಬಾರ್ಯ,ಮೋನಪ್ಪ ಗೌಡ, ಸುದೇಶ. ಕೆ, ರಾಮಣ್ಣಗೌಡ , ಅರುಣ ಬಂಗೇರ, ಸುದರ್ಶನ.ಕೆ ಹಾಗೂ ಊರ ಹತ್ತು ಸಮಸ್ತರು ಮತ್ತು ಸ್ವಯಂಸೇವಕರು ಜಾತ್ರೆಯ ಯಶಸ್ಸಿಗೆ ಸಹಕಾರ ನೀಡಿದರು. ನೇಮೋತ್ಸವದಲ್ಲಿ 9 ಗುತ್ತಿನ ಮನೆಯವರು ಭಾಗವಹಿಸಿದ್ದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya
error: Content is protected !!