26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ಬಾರ್ಯ : ಬಾರ್ಯ ಶ್ರೀ ಮಹಾ ವಿಷ್ಣು ದೇವಸ್ಥಾನದ ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.

ಸಾಮೂಹಿಕ ಪ್ರಾರ್ಥನೆ ,ಹೊರೆ ಕಾಣಿಕೆ ಸಮರ್ಪಣೆ ,ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಪುತ್ತಿಲ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ , ತಾಂಬೂಲ ಕಲಾವಿದರು ಪುಂಜಾಲಕಟ್ಟೆ ತಂಡದಿಂದ ತುಳು ನಾಟಕ ,ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ತಂಡದಿಂದ ಜಾಂಬವತಿ ಕಲ್ಯಾಣ ತಾಳಮದ್ದಳೆ, ದೇವರಿಗೆ ಪಂಚ ವಿಂಶತಿ ಕಲಶಾಭಿಷೇಕ, ನಾಗತಂಬಿಲ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನ ಸಂತರ್ಪಣೆ, ಗ್ರಾಮ ದೈವ ಪಂಜುರ್ಲಿ ನೇಮೋತ್ಸವದೊಂದಿಗೆ ಜರಗಿತು.

ದೇವಳದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಬಾರ್ಯ, ಪ್ರಧಾನ ಅರ್ಚಕ ಗುರುಪ್ರಸಾದ ನೂರಿತ್ತಾಯ, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಉತ್ಸವ ಸಮಿತಿ ಸಂಚಾಲಕ ಯಜ್ಞೇಶ ಪುತ್ತಿಲ, ಟ್ರಸ್ಟ್ ಪದಾಧಿಕಾರಿಗಳಾದ ಪ್ರಶಾಂತ ಪೈ ಬಾರ್ಯ ,ರಾಜೇಶ್ ರಾವ್ ,ವಿದ್ಯಾ ಪ್ರಭಾಕರ, ಪ್ರಶಾಂತ ಕುಮಾರ್, ಪ್ರವೀಣ.ಯಂ, ಮನೋಹರ ಶೆಟ್ಟಿ, ನಾರಾಯಣಗೌಡ, ಶ್ರೀಮತಿ ನವೀನ, ಜಿ . ಉಮೇಶ, ಚೇತನ್ ಕುಮಾರ್ , ಶಿವರಾಮ ನಾಯ್ಕ, ಬಾಲಕೃಷ್ಣ ಶೆಟ್ಟಿ , ವಿಶ್ವನಾಥ ಗೌಡ, ವಿಜಯಲಕ್ಷ್ಮೀ ರೈ ಬಾರ್ಯ,ಮೋನಪ್ಪ ಗೌಡ, ಸುದೇಶ. ಕೆ, ರಾಮಣ್ಣಗೌಡ , ಅರುಣ ಬಂಗೇರ, ಸುದರ್ಶನ.ಕೆ ಹಾಗೂ ಊರ ಹತ್ತು ಸಮಸ್ತರು ಮತ್ತು ಸ್ವಯಂಸೇವಕರು ಜಾತ್ರೆಯ ಯಶಸ್ಸಿಗೆ ಸಹಕಾರ ನೀಡಿದರು. ನೇಮೋತ್ಸವದಲ್ಲಿ 9 ಗುತ್ತಿನ ಮನೆಯವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya
error: Content is protected !!