July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯವರಾದ ವೆಂಕಟ್ರಮಣ ರಾವ್ ಆಗಮಿಸಿ ಪಂಚ ಪರಿವರ್ತನೆಗಳಾದ ಕುಟುಂಬ ಪ್ರಬೋಧನ, ಸಾಮರಸ್ಯ, ಪರ್ಯಾವರಣ, ಸ್ವದೇಶಿ ವಸ್ತುಗಳ ಉಪಯೋಗ, ನಾಗರಿಕ ಶಿಷ್ಟಾಚಾರವನ್ನು ವಿದ್ಯಾರ್ಥಿಗಳು ಮೈಗೂಡಿಸುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.


ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ದೀಪವನ್ನು ನೀಡುವುದರ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯಾ ಕಾರ್ಯಕ್ರಮವನ್ನು ನಿರೂಪಿಸಿ, ಧನುಷ್ ಧನ್ಯವಾದಗೈದರು.

Related posts

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya
error: Content is protected !!