July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

ಬೆಳ್ತಂಗಡಿ : ಉಪ್ಪಿನಂಗಡಿ ಗ್ರಾಮದ ಪಂಜಳ ಪ್ರದೇಶದಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಎಂ.ಡಿ.ಎಂ.ಎ. ಮಾದಕ ವಸ್ತು ಪತ್ತೆಯಾಗಿದೆ.

ಬಂಧಿತ ವ್ಯಕ್ತಿಯನ್ನು ಕೊಕ್ಕಡ ನಿವಾಸಿ ಯಹ್ಯಾ (48) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಆತನು ಮಾರಾಟ ಉದ್ದೇಶದಿಂದ ಎಂ.ಡಿ.ಎಂ.ಎ. ಹೊಂದಿರುವುದಾಗಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಹಜರಿನಲ್ಲಿ ಆರೋಪಿಯಿಂದ ಒಟ್ಟು 2.16 ಗ್ರಾಂ. ಎಂ.ಡಿ.ಎಂ.ಎ. (ಅಂದಾಜು ಮೌಲ್ಯ ರೂ.3,000/-), ಒಂದು ಐಫೋನ್ (ಅಂದಾಜು ಮೌಲ್ಯ ರೂ.45,000/-) ಹಾಗೂ ಒಂದು ಸ್ಯಾಮ್ಸ್ಂಗ್ ಕೀ-ಪ್ಯಾಡ್ ಮೊಬೈಲ್ (ಅಂದಾಜು ಮೌಲ್ಯ ರೂ.1,000/-) ವಶಪಡಿಸಿಕೊಳ್ಳಲಾಗಿದೆ. ಒಟ್ಟು ರೂ.49,000/- ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Related posts

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya
error: Content is protected !!