32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯವರಾದ ವೆಂಕಟ್ರಮಣ ರಾವ್ ಆಗಮಿಸಿ ಪಂಚ ಪರಿವರ್ತನೆಗಳಾದ ಕುಟುಂಬ ಪ್ರಬೋಧನ, ಸಾಮರಸ್ಯ, ಪರ್ಯಾವರಣ, ಸ್ವದೇಶಿ ವಸ್ತುಗಳ ಉಪಯೋಗ, ನಾಗರಿಕ ಶಿಷ್ಟಾಚಾರವನ್ನು ವಿದ್ಯಾರ್ಥಿಗಳು ಮೈಗೂಡಿಸುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.


ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ದೀಪವನ್ನು ನೀಡುವುದರ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯಾ ಕಾರ್ಯಕ್ರಮವನ್ನು ನಿರೂಪಿಸಿ, ಧನುಷ್ ಧನ್ಯವಾದಗೈದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya
error: Content is protected !!