September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಡಳಿತಕ್ಕೊಳಪಟ್ಟ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯವರಾದ ವೆಂಕಟ್ರಮಣ ರಾವ್ ಆಗಮಿಸಿ ಪಂಚ ಪರಿವರ್ತನೆಗಳಾದ ಕುಟುಂಬ ಪ್ರಬೋಧನ, ಸಾಮರಸ್ಯ, ಪರ್ಯಾವರಣ, ಸ್ವದೇಶಿ ವಸ್ತುಗಳ ಉಪಯೋಗ, ನಾಗರಿಕ ಶಿಷ್ಟಾಚಾರವನ್ನು ವಿದ್ಯಾರ್ಥಿಗಳು ಮೈಗೂಡಿಸುವ ಮೂಲಕ ದೇಶದ ಕೀರ್ತಿಯನ್ನು ಹೆಚ್ಚಿಸಬೇಕು ಎಂದರು. ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.


ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ದೀಪವನ್ನು ನೀಡುವುದರ ಮೂಲಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಜವಾಬ್ದಾರಿಯನ್ನು ಹಸ್ತಾಂತರಿಸಿದರು.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯಾ ಕಾರ್ಯಕ್ರಮವನ್ನು ನಿರೂಪಿಸಿ, ಧನುಷ್ ಧನ್ಯವಾದಗೈದರು.

Related posts

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya
error: Content is protected !!