25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

ನಿಡ್ಲೆ: ಬರೆಂಗಾಯ ಪೊರ್ಕಳ ಕಸಬಾ ಭಟಾರಿ ಭೂತ ಆಡಳಿತ ಟ್ರಸ್ಟ್ ನ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ರಿಂದ 13ರವರೆಗೆ ನಡೆಯಲಿದೆ.

ಇಂದು(ಫೆ.12) ವಣಸಾಯದಲ್ಲಿ ವನದುರ್ಗಾರಾಧನೆ , ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನವು ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆ ಬರೆಂಗಾಯ ವಿಶ್ವಸ್ಥ ಮಂಡಳಿ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು, ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ನಡೆಯಲಿದೆ.

ಫೆ. 13 ರಂದು ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಳಸ ನದಿಯಲ್ಲಿ ಮುಳುಗಿದ ಯುವಕನ ದೇಹ ಪತ್ತೆ; ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ಘಟಕದ ಸ್ವಯಂಸೇವಕರು

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya
error: Content is protected !!