July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

ಬೆಳ್ತಂಗಡಿ : ಬಳಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್ ಗೆ ಕರೆದುಕೊಂಡು ಹೋಗಿ ವಾಪಸ್ ಕರೆದುಕೊಂಡು ಬಂದಿದ್ದ ವಿಡಿಯೋ ವೈರಲ್ ಅಗಿತ್ತು.

ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಬೆನ್ನಲ್ಲೇ ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳಂಜ ಶಾಲೆಗೆ ಭೇಟಿ ನೀಡಿ ವರದಿ ಮಾಡಿಕೊಂಡು ಅ ವರದಿಯನ್ನು ಮಂಗಳೂರು ಡಿಡಿಪಿಐ ಶಶಿಧರ್. ಜಿ.ಎಸ್ ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರನ್ನು ಫೆ.12 ರಂದು ಮಧ್ಯಾಹ್ನ ವೇಳೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya
error: Content is protected !!