23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಫೆ 16ರಂದು ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೊಸಲಾಯಿ ತಿಳಿಸಿದರು.

ಬೆಳಿಗ್ಗೆ ತೋರಣ ಮುಹೂರ್ತ,ಏಕದಶಿ ರುದ್ರಾಭಿಷೇಕ, ಕಾಯಿ ಪೂಜೆ, ಮಹಾಪೂಜೆ ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ರಂಗಪೂಜೆ ನಡೆಯಲಿದೆ.ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಉತ್ಸವ, ಬಟ್ಟಲು ಕಾಣಿಕೆ ನಡೆಯಲಿದೆ.ರಾತ್ರಿ ದೈವಗಳ ಭಂಢಾರ ಬಂದು ಉಳ್ಳಾಲ್ತಿ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದರು.

ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ:
ಮಧ್ಯಾಹ್ನ ಗಂಟೆ 2ರಿಂದ ಬೊಂಟ್ರಾಡೆಯಿಂದ ಭಂಡಾರ ಬಂದು ಹಗಲು ನೇಮೋತ್ಸವ ನಡೆಯಲಿದೆ.ರಾತ್ರಿ 7 ರಿಂದ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋಧಾವಳಿಗಳು ನಡೆಯಲಿದೆ. ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ.ಬಳಿಕ ಸಾಮಾಜಿಕ ನಾಟಕ ಕಾಶಿತೀರ್ಥ ಪ್ರದರ್ಶನಗೊಳ್ಳಲಿದೆ.ರಾತ್ರಿ 1ಗಂಟೆಯಿಂದ ಪುರುಷರಾಯ ಮತ್ತು ಪರಿವಾರದ ದೈವಗಳ ನೇಮೋತ್ಸವ ನಡೆಯಲಿದೆ.

ಧಾರ್ಮಿಕ ಬಂಧುತ್ವ ಸಭೆ: ಕಾರ್ಯಕ್ರಮದ ವಿಶೇಷವಾಗಿ ದಾರ್ಮಿಕ ಬಂಧುತ್ವ ಸಭೆಯು ಫೆ 19ರಂದು ನಡೆಯಲಿದೆ. ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್, ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ, ಪ್ರಮುಖರಾದ ಶೇಖರ್ ಕುಕ್ಕೇಡಿ ,ಡಾ.ಶಶಿಧರ ಡೋಂಗ್ರೆ, ಕೃಷ್ಣಪ್ಪ ಗೌಡ ದೇವಸ ಸವಣಾಲು, ಸಂಜೀವ ಪೂಜಾರಿ ಕೊಡಂಗೆ, ಜಯಶೀಲ ಕುಶಾಲಪ್ಪ ಗೌಡ,ಕೆ.ಸುನೀಲ್ ಕುಮಾರ್ ಜೈನ್, ಚಿದಾನಂದ ಪೂಜಾರಿ ಎಲ್ದಕ್ಕ ಭಾಗವಹಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೊಸಲಾಯಿ ವಹಿಸಲಿದ್ದಾರೆ.

ಫೆ 20, ಕೂಟೆಕ್ಕಿನಡೆ ದೊಂಪದ ಬಲಿ,ಫೆ 24 ರಾತ್ರಿ ರಂಗಪೂಜೆ ನಡೆಯಲಿದೆ. ಸಾರ್ವಜನಿಕ ಅನ್ನಸಂತರ್ಪಣೆ,ಅಂಗಣ ಪಂಜುರ್ಲಿ ನೇಮೋತ್ಸವ ನಡೆಯಲಿದೆ.

Related posts

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya
error: Content is protected !!