September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

ಬಳಂಜ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಪಾಠ ಹೇಳಬೇಕಾದ ಶಿಕ್ಷಕರು ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ವಾಹನದಲ್ಲಿ ಕಾನೂನು ಬಾಹಿರವಾಗಿ ವಿಹಾರಕ್ಕೆ ಕರೆದೊಯ್ದ ಘಟನೆ ಬಳಂಜದಲ್ಲಿ ಬೆಳಕಿಗೆ ಬಂದಿದ್ದು ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕು ಬಳಂಜ ಗ್ರಾಮದ ಸರಕಾರಿ ಶಾಲೆಯ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ನಿರ್ಧರಿಸಿದಂತೆ, ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ಒಂದು ಸುರಕ್ಷಿತವಾದ ವಾಹನವನ್ನು ಗೊತ್ತು ಮಾಡುವ ಬದಲಾಗಿ ತೆರೆದ ಪಿಕಪ್ ವಾಹನದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಪಾಯಕಾರಿಯಾಗಿ ಕರೆದೊಯ್ದಿದ್ದು ಶಿಕ್ಷಕರ ಬೇಜವಾಬ್ದಾರಿ ಮತ್ತು ಅವಿವೇಕಿತನಕ್ಕೆ ಸಾಕ್ಷಿಯಾಗಿದೆ. ಮನರಂಜನೆ, ವಿಹಾರಗಳೆಂದರೆ ಸಹಜವಾಗಿ ಸಂಭ್ರಮಿಸುವ ಮುಗ್ಧ ಮಕ್ಕಳನ್ನು ಟಿಪ್ಪರ್, ಪಿಕಪ್ ನಲ್ಲಿ ವಿಹಾಕ್ಕೆ ಕರೆದುಕೊಂಡು ಹೊದ ಶಿಕ್ಷಕರ ಬೇಜವಾಬ್ದಾರಿಯ ನಡೆಯ ಬಗ್ಗೆ ಪೋಷಕರಿಂದ, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಆಕ್ರೋಶಗೊಂಡ ಪೋಷಕರು ಈಗಾಗಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಕೂಲಿಕಾರ್ಮಿಕರನ್ನು ಪಿಕಪ್, ಟಿಪ್ಪರ್ ಗಳಲ್ಲಿ ಕೆಲಸಕ್ಕೆ ಕರೆದೊಯ್ದ ಪ್ರಸಂಗಗಳಿಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರು, ಬಳಂಜ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪಿಕಪ್, ಟಿಪ್ಪರ್ ಗಳಲ್ಲಿ ಪುಟಾಣಿ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ದ ಘಟನೆಗೆ ಕಾರಣಕರ್ತರಾದ ಶಿಕ್ಷಕರ ವಿರುದ್ದ ಪೊಲೀಸರು, ಆರ್.ಟಿ.ಒ ಅಥವಾ ಶಿಕ್ಷಣ ಇಲಾಖೆ ಯಾವ ಕ್ರಮಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತಿದ್ದಾರೆ.

Related posts

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಉರುವಾಲು ಮಹಮ್ಮಾಯಿ ಭೈರವ ಗುಡಿಯ ಶಿಲಾನ್ಯಾಸ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!