July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

ಬಳಂಜ: ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಪಾಠ ಹೇಳಬೇಕಾದ ಶಿಕ್ಷಕರು ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ವಾಹನದಲ್ಲಿ ಕಾನೂನು ಬಾಹಿರವಾಗಿ ವಿಹಾರಕ್ಕೆ ಕರೆದೊಯ್ದ ಘಟನೆ ಬಳಂಜದಲ್ಲಿ ಬೆಳಕಿಗೆ ಬಂದಿದ್ದು ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕು ಬಳಂಜ ಗ್ರಾಮದ ಸರಕಾರಿ ಶಾಲೆಯ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ನಿರ್ಧರಿಸಿದಂತೆ, ಮಕ್ಕಳನ್ನು ವಿಹಾರಕ್ಕೆ ಕರೆದೊಯ್ಯಲು ಒಂದು ಸುರಕ್ಷಿತವಾದ ವಾಹನವನ್ನು ಗೊತ್ತು ಮಾಡುವ ಬದಲಾಗಿ ತೆರೆದ ಪಿಕಪ್ ವಾಹನದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಪಾಯಕಾರಿಯಾಗಿ ಕರೆದೊಯ್ದಿದ್ದು ಶಿಕ್ಷಕರ ಬೇಜವಾಬ್ದಾರಿ ಮತ್ತು ಅವಿವೇಕಿತನಕ್ಕೆ ಸಾಕ್ಷಿಯಾಗಿದೆ. ಮನರಂಜನೆ, ವಿಹಾರಗಳೆಂದರೆ ಸಹಜವಾಗಿ ಸಂಭ್ರಮಿಸುವ ಮುಗ್ಧ ಮಕ್ಕಳನ್ನು ಟಿಪ್ಪರ್, ಪಿಕಪ್ ನಲ್ಲಿ ವಿಹಾಕ್ಕೆ ಕರೆದುಕೊಂಡು ಹೊದ ಶಿಕ್ಷಕರ ಬೇಜವಾಬ್ದಾರಿಯ ನಡೆಯ ಬಗ್ಗೆ ಪೋಷಕರಿಂದ, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಆಕ್ರೋಶಗೊಂಡ ಪೋಷಕರು ಈಗಾಗಲೇ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ದೂರು ನೀಡಿದ್ದಾರೆ.ಕೂಲಿಕಾರ್ಮಿಕರನ್ನು ಪಿಕಪ್, ಟಿಪ್ಪರ್ ಗಳಲ್ಲಿ ಕೆಲಸಕ್ಕೆ ಕರೆದೊಯ್ದ ಪ್ರಸಂಗಗಳಿಗೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವ ಪೊಲೀಸರು, ಬಳಂಜ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪಿಕಪ್, ಟಿಪ್ಪರ್ ಗಳಲ್ಲಿ ಪುಟಾಣಿ ಮಕ್ಕಳನ್ನು ವಿಹಾರಕ್ಕೆ ಕರೆದೊಯ್ದ ಘಟನೆಗೆ ಕಾರಣಕರ್ತರಾದ ಶಿಕ್ಷಕರ ವಿರುದ್ದ ಪೊಲೀಸರು, ಆರ್.ಟಿ.ಒ ಅಥವಾ ಶಿಕ್ಷಣ ಇಲಾಖೆ ಯಾವ ಕ್ರಮಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತಿದ್ದಾರೆ.

Related posts

ಎಂಸಿಎಫ್ ನ ಸಿ ಎಸ್ ಆರ್ ಆಕ್ಟಿವಿಟಿ ಯೋಜನೆ ಅಡಿಯಲ್ಲಿ ಪೆರಿಂಜೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಲಾದ ನೂತನ ಶೌಚಾಲಯದ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya
error: Content is protected !!