ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು.


ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ, ತುರ್ತು ಆರೋಗ್ಯ ಸೇವೆ, ಮಾಹಿತಿ ವಿಭಾಗ, ಪೊಲೀಸ್ ಚೌಕಿಯನ್ನೂ ತೆರೆಯಲಾಗಿದೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕಡೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಯಂ-ಸೇವಕರು ಪಾದಯಾತ್ರಿಗಳ ಸೇವೆಗೆ ಸಜ್ಜಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya
error: Content is protected !!