23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಅಭಿನಂದನಾ ಸಮಾರಂಭ ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ನಿರಂತರ ಇಪ್ಪತ್ತು ವರ್ಷಗಳ ಕಾಲ ಮೂರು ಭಾರಿ ಪಂಚಾಯತ್ ಸದಸ್ಯರಾಗಿ ಪ್ರಸ್ತುತ ಅಧ್ಯಕ್ಷರಾಗಿದ್ದು ಸಮಾಜ ಸೇವೆ ಸಲ್ಲಿಸಿದ ದಿವಾಕರ ಮತ್ತು ರೋಹಿಣಿ ದಂಪತಿಯ ನೇತೃತ್ವದಲ್ಲಿ ಸನ್ಮಾನ ಹಾಗೂ ಔತನ ಕೂಟ ನಡೆಯಿತು.

ಬೆಳ್ತಂಗಡಿ ಕೃಷಿ ಇಲಾಖೆಯ ನಿರ್ದೇಶಕರಾದ ಎಮ್. ವೀರಭದ್ರಪ್ಪ,.ಕಳಿಯ ಕೃ. ಪ.ಸ.ಸಂಘದ ಅಧ್ಯಕ್ಷ ವಸಂತ ಮಜಲು, ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ ಪಡೆದ ಗೇರುಕಟ್ಟೆ ಸರಕಾರಿ ಫ್ರೌಡ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕೊಕ್ರಾಡಿ, ಅತ್ಯುತ್ತಮ ಗ್ರಾಮ ಅಡಳಿತ ಅಧಿಕಾರಿ ಪ್ರಶಸ್ತಿ ಪಡೆದ ನಿಡ್ಲೆ ಗ್ರಾಮ ಲೆಕ್ಕ ಅಧಿಕಾರಿ ಪ್ರಥ್ವಿರಾಜ್ ಶೆಟ್ಟಿ, ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್‌, ಕಳಿಯ ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ಕುಂಞ ಕೆ., ಪಂಚಾಯತ್ ಮಾಜಿ ಸದಸ್ಯರಾದ ತುಕಾರಾಂ ಪೂಜಾರಿ ಗೇರುಕಟ್ಟೆ ವಾರಿಜ , ಕೇಶವ ಪೂಜಾರಿ ನಾಳ, ಪ್ರದೀಪ್ ಕುಮಾರ್ ಪೆರಾಜೆ, ಶರತ್ ಕುಮಾರ್ ಶೆಟ್ಟಿ, ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ ಮಜಲು, ವಿಜಯ ಕುಮಾರ್ ಕೆ., ಲತೀಫ್ ಪರಿಮ,ಹರೀಶ್ ಕುಮಾರ್ ಬಿ, ಉಪಾಧ್ಯಕ್ಷೆ ಇಂದಿರಾ ಬಿ ಶೆಟ್ಟಿ., ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಸುಭಾಷಿಣಿ ಕೆ. ಮಾಜಿ ಉಪಾಧ್ಯಕ್ಷೆ ,ಹಾಲಿ ಸದಸ್ಯೆ ಕುಸುಮ ಎನ್.ಬಂಗೇರ, ಮೋಹಿನಿ, ಮರೀಟಾ ಪಿಂಟೊ, ಶ್ವೇತಾ ಶ್ರೀನಿವಾಸ್, ಪುಷ್ಫ ನಾಳ, ಶಕುಂತಲಾ, ಕಳಿಯ ಪ್ರಾಥಮಿಕ ಉಪ ಆರೋಗ್ಯ ಕೇಂದ್ರ ಸಿ.ಹೆಚ್.ಒ. ಡಾ.ನಾಗರಾಜ್, ಗೇರುಕಟ್ಟೆ ಹಾ.ಉ.ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ., ಕಳಿಯ ಸಿ.ಎ.ಬ್ಯಾಂಕ್ ನಿರ್ದೇಶಕರಾದ ಶೇಖರ ನಾಯ್ಕ, ಬಾಲಕೃಷ್ಣ ಬಿರ್ಮೋಟ್ಟು, ಕಳಿಯ ಬಿಜೆಪಿ ಪಕ್ಷದ ಪ್ರಮುಖರಾದ ನಂದೀಶ್ ಶೆಟ್ಟಿ, ಕರುಣಾಕರ ಶೆಟ್ಟಿ, ಕೆ.ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

ಸಹಕಾರ ಭಾರತೀ ಸಂಘದ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ಸನ್ಮಾನ ಸ್ವೀಕರಿಸಿ, ಕಾರ್ಯಕ್ರಮ ನಿರೂಪಿಸಿದರು. ಗ್ರಾಮಸ್ಟರು ಉಪಸ್ಥಿತರಿದ್ದರು.

Related posts

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya
error: Content is protected !!