September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ ಬ್ರಹ್ಮ ಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ. 12ರಿಂದ 16ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಫೆ. 12ರಂದು ಬೆಳಿಗ್ಗೆ ಪ್ರಾರ್ಥನೆ ಪಂಚಗವ್ಯ ಪುಣ್ಯಾಹ, ಗಣಹೋಮ, ಸಾನಿಧ್ಯ ಕಲಶ ಪೂಜೆ, ಸಾನಿಧ್ಯ ಕಲಶಾಭಿಷೇಕ ಬಳಿಕ ಕೊಡಿ ಏರುವುದರ ಮೂಲಕ ಜಾತ್ರೋತ್ಸವ ಚಾಲನೆ ಗೊಂಡಿತು. ಮಧ್ಯಾಹ್ನ ಮಹಾಪೂಜೆ ಉತ್ಸವಬಲಿ ನಡೆಯಿತು.

ಸಂಜೆ ದೀಪರಾಧನೆ, 7-00ರಿಂದ ಊರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ದೊಡ್ಡ ರಂಗ ಪೂಜೆ, ಫೆ.13ರಂದು ಬೆಳಿಗ್ಗೆ ಗಣಹೋಮ ಉಷ ಪೂಜೆ, ಬಿಂಬ ಶುದ್ಧಿ, ಕಲಶ ಪೂಜೆ, ಸಾನಿಧ್ಯ ಕಲಶಾಭಿಷೇಕ, ಮಹಾ ಪೂಜೆ, ತತ್ವ ಬಲಿ, ಉತ್ಸವ ಬಲಿ, ದೀಪರಾಧನೆ, ರಾತ್ರಿ ರಂಗ ಪೂಜೆ, ಉತ್ಸವ ಬಲಿ, ನೃತ್ಯ ಬಲಿ, ಶಾರದಾ ಆರ್ಟ್ಸ್ ಐಸಿರಿ ಕಲಾವಿದರು ಮಂಜೇಶ್ವರ ಇವರಿಂದ ಪೌರಾಣಿಕ ನಾಟಕ. “ಭಜರಂಗಿ ಬಲಿ ” ಪ್ರದರ್ಶನ ಗೊಳ್ಳಲಿದೆ.

ಫೆ.14ರಂದು ಬೆಳಿಗ್ಗೆ ಗಣಹೋಮ, ಉಷಪೂಜೆ, ಪ್ರಾತ ಬಲಿ, ಸಾನಿಧ್ಯ ನವಕ ಕಲಶಾಭಿಷೇಕ, ಉತ್ಸವ ಬಲಿ, ಸಂಜೆ ದೀಪರಾಧನೆ, ರಾತ್ರಿ ದೊಡ್ಡ ರಂಗ ಪೂಜೆ, ಧಾರ್ಮಿಕ ಸಭೆ, ಪಂಚಶ್ರೀ ಸಾಂಸ್ಕೃತಿಕ ಕಲಾ ಕೇಂದ್ರದ ವಿದ್ಯಾರ್ಥಿಗಳಳಿಂದ ಯಕ್ಷಗಾನ “ಪಾಂಚಜನ್ಯ”, ಫೆ.15ರಂದು ಬೆಳಿಗ್ಗೆ ಗಣಹೋಮ, ವೈದಿಕ ವಿಧಿವಿಧಾನ, ತುಲಾಭಾರ ಸೇವೆಸಂಜೆ ದೀಪರಾಧನೆ,, ಮತ್ತೂರು ಬೆಡಿ ಸೇವೆ, ಭಜನಾ ಕಮ್ಮಟೋತ್ಸವ, ರಾತ್ರಿ ದೊಡ್ಡ ರಂಗಪೂಜೆ, ರಥಬೀದಿ ಯಿಂದ ದೇವರ ಕಟ್ಟೆಗೆ ದೇವರ ಸವಾರಿ ಕಟ್ಟೆ ಪೂಜೆ ಸಿಡಿ ಮದ್ದು ಪ್ರದರ್ಶನ, ನೃತ್ಯ ಬಲಿ, ಬಟ್ಟಲು ಕಾಣಿಕೆ, ಕವಾಟ ಬಂಧನ. ಫೆ. 16ರಂದು ಬೆಳಿಗ್ಗೆ, ಕವಾಟೋದ್ಘಾಟನೆ, ಆರಟು ಬಲಿ, ಅರಾಟು ಉತ್ಸವ, ದೇವರ ಜಳಕ, ಕಟ್ಟೆ ಪೂಜೆ, ಬಟ್ಟಲು ಕಾಣಿಕೆ, ಕೋಡಿ ಇಳಿಸುವುದು, ಸಂಪ್ರೋಕ್ಷಣೆ ಸಂಜೆ ದೈವಗಳ ಭಂಡಾರ ಹೊರಡುವುದು ಬಳಿಕ ಪಿಲಿಚಾಮುಂಡಿ ಮತ್ತು ಅಂಗಣ ಪಂಜುರ್ಲಿ ದೈವಗಳಿಗೆ ನೇಮೋತ್ಸವ, ರಾತ್ರಿ ರಂಗಪೂಜೆ ನಡೆಯಲಿದೆ.

Related posts

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya
error: Content is protected !!