22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

ಮಡಂತ್ಯಾರು: ಜೆಸಿಐ ಮಡಂತ್ಯಾರು ಇದರ ನೇತೃತ್ವದಲ್ಲಿ “ವೃತ್ತಿ ಮಾರ್ಗದರ್ಶನ” ದ ಕುರಿತಾದ‌ ಎರಡನೇಯ ತರಬೇತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಚ್ಚಿನದ ಸಹಯೋಗದಲ್ಲಿ ನಡೆಯಿತು.

ಸರಕಾರಿ ಪ್ರೌಢಶಾಲೆ ಮಚ್ಚಿನದ ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಎಂ. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆಸಿಐ ಮಂಗಳೂರು ಸಾಮ್ರಾಟ್ ಇದರ ಅಧ್ಯಕ್ಷ, ಹೆಸರಾಂತ ತರಬೇತುದಾರರಾದ ಜೆಸಿ ಪ್ರೀತಿ ಶೆಟ್ಟಿಗಾರ್ ಅವರ ಪರಿಚಯವನ್ನು ಮಾಡಿದರು.

ನಂತರದಲ್ಲಿ ತರಬೇತುದಾರರಾದ ಜೇಸಿ ಪ್ರೀತಿ ಶೆಟ್ಟಿಗಾರ್ ಅವರು ಅತ್ಯದ್ಭುತವಾಗಿ, ವಿದ್ಯಾರ್ಥಿಗಳನ್ನು ತನ್ನೆಡೆಗೆ ಸೆಳೆದು, ಅವರಿಗೆ ಮನಮುಟ್ಟುವಂತೆ, ಅತ್ಯಾಪ್ತವಾಗಿ ಮಾತನ್ನಾಡುತ್ತಾ, ನಡುನಡುವೆ ನಗೆ ಚಟಾಕಿಗಳನ್ನು ಹಾರಿಸುತ್ತಾ, ವೃತ್ತಿ ಮಾರ್ಗದರ್ಶನದ ಬಗ್ಗೆ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಸಂತಸದಿಂದ ಪಾಲ್ಗೊಂಡರು.

ಅಧ್ಯಕ್ಷರು ಸಭೆಯ ಉತ್ತರಾರ್ಧ ಭಾಗವನ್ನು ಸುಸ್ಥಿತಿಗೆ ತಂದ ಬಳಿಕ ವಿದ್ಯಾರ್ಥಿಗಳು ತರಬೇತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಸುರೇಶ್ ಎಂ. ಅವರು ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ದೈಹಿಕ ಶಿಕ್ಷಕ ಸುಭಾಷ್ ಅರುವ ಕಾರ್ಯಕ್ರಮದ ಬಗ್ಗೆ ಸಂತಸದ ಮಾತುಗಳನ್ನಾಡಿದರು. ಜೆಸಿಐ ಮಡಂತ್ಯಾರಿನ ನಿಕಟಪೂರ್ವ ಅಧ್ಯಕ್ಷ ಜೇಸಿ ಅಮಿತಾ ಅಶೋಕ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಜೇಸಿ ಸಾಯಿಸುಮಾ ಎಂ ನಾವಡ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನದ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ತರಬೇತಿ ಕಾರ್ಯಕ್ರಮದ ಸಂಯೋಜಕಿ ಜೇಸಿ ಅಶ್ವಿನಿ ಕುಮಾರಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿಐ ಮಡಂತ್ಯಾರು “ಆಯನ – 2026” ಇದರ ಅಧ್ಯಕ್ಷ ಜೇಸಿ ಜೆಎಫ್ ಎಮ್ ಸಾಯಿಸುಮಾ ಎಂ ನಾವಡ ಇವರು ಸಭೆಯನ್ನು ಸುಸ್ಥಿತಿಗೆ ತಂದರು. ಶಾಲಾ ವಿದ್ಯಾರ್ಥಿಗಳು ಶುಭ ಆರಂಭದ ಸಂಕೇತವಾಗಿ ಪ್ರಾರ್ಥನೆಯನ್ನು ಹಾಡಿದರು. ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ ಜೇಸಿ ವಾಣಿಯನ್ನು ವಾಚಿಸಿದರು. ಜೆಸಿಐ ಮಡಂತ್ಯಾರಿನ ಅಧ್ಯಕ್ಷ ಜೇಸಿ ಸಾಯಿಸುಮಾ ಎಂ ನಾವಡ ಇವರು ಅತಿಥಿಗಳನ್ನು ಸ್ವಾಗತಿಸಿದರು. ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ ಧನ್ಯವಾದವಿತ್ತರು.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya
error: Content is protected !!