September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

ಮಡಂತ್ಯಾರು: ಜೆಸಿಐ ಮಡಂತ್ಯಾರು ಇದರ ನೇತೃತ್ವದಲ್ಲಿ “ವೃತ್ತಿ ಮಾರ್ಗದರ್ಶನ” ದ ಕುರಿತಾದ‌ ಎರಡನೇಯ ತರಬೇತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಚ್ಚಿನದ ಸಹಯೋಗದಲ್ಲಿ ನಡೆಯಿತು.

ಸರಕಾರಿ ಪ್ರೌಢಶಾಲೆ ಮಚ್ಚಿನದ ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಎಂ. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆಸಿಐ ಮಂಗಳೂರು ಸಾಮ್ರಾಟ್ ಇದರ ಅಧ್ಯಕ್ಷ, ಹೆಸರಾಂತ ತರಬೇತುದಾರರಾದ ಜೆಸಿ ಪ್ರೀತಿ ಶೆಟ್ಟಿಗಾರ್ ಅವರ ಪರಿಚಯವನ್ನು ಮಾಡಿದರು.

ನಂತರದಲ್ಲಿ ತರಬೇತುದಾರರಾದ ಜೇಸಿ ಪ್ರೀತಿ ಶೆಟ್ಟಿಗಾರ್ ಅವರು ಅತ್ಯದ್ಭುತವಾಗಿ, ವಿದ್ಯಾರ್ಥಿಗಳನ್ನು ತನ್ನೆಡೆಗೆ ಸೆಳೆದು, ಅವರಿಗೆ ಮನಮುಟ್ಟುವಂತೆ, ಅತ್ಯಾಪ್ತವಾಗಿ ಮಾತನ್ನಾಡುತ್ತಾ, ನಡುನಡುವೆ ನಗೆ ಚಟಾಕಿಗಳನ್ನು ಹಾರಿಸುತ್ತಾ, ವೃತ್ತಿ ಮಾರ್ಗದರ್ಶನದ ಬಗ್ಗೆ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಸಂತಸದಿಂದ ಪಾಲ್ಗೊಂಡರು.

ಅಧ್ಯಕ್ಷರು ಸಭೆಯ ಉತ್ತರಾರ್ಧ ಭಾಗವನ್ನು ಸುಸ್ಥಿತಿಗೆ ತಂದ ಬಳಿಕ ವಿದ್ಯಾರ್ಥಿಗಳು ತರಬೇತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಸುರೇಶ್ ಎಂ. ಅವರು ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ದೈಹಿಕ ಶಿಕ್ಷಕ ಸುಭಾಷ್ ಅರುವ ಕಾರ್ಯಕ್ರಮದ ಬಗ್ಗೆ ಸಂತಸದ ಮಾತುಗಳನ್ನಾಡಿದರು. ಜೆಸಿಐ ಮಡಂತ್ಯಾರಿನ ನಿಕಟಪೂರ್ವ ಅಧ್ಯಕ್ಷ ಜೇಸಿ ಅಮಿತಾ ಅಶೋಕ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಜೇಸಿ ಸಾಯಿಸುಮಾ ಎಂ ನಾವಡ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನದ ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ತರಬೇತಿ ಕಾರ್ಯಕ್ರಮದ ಸಂಯೋಜಕಿ ಜೇಸಿ ಅಶ್ವಿನಿ ಕುಮಾರಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಜೆಸಿಐ ಮಡಂತ್ಯಾರು “ಆಯನ – 2026” ಇದರ ಅಧ್ಯಕ್ಷ ಜೇಸಿ ಜೆಎಫ್ ಎಮ್ ಸಾಯಿಸುಮಾ ಎಂ ನಾವಡ ಇವರು ಸಭೆಯನ್ನು ಸುಸ್ಥಿತಿಗೆ ತಂದರು. ಶಾಲಾ ವಿದ್ಯಾರ್ಥಿಗಳು ಶುಭ ಆರಂಭದ ಸಂಕೇತವಾಗಿ ಪ್ರಾರ್ಥನೆಯನ್ನು ಹಾಡಿದರು. ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ ಜೇಸಿ ವಾಣಿಯನ್ನು ವಾಚಿಸಿದರು. ಜೆಸಿಐ ಮಡಂತ್ಯಾರಿನ ಅಧ್ಯಕ್ಷ ಜೇಸಿ ಸಾಯಿಸುಮಾ ಎಂ ನಾವಡ ಇವರು ಅತಿಥಿಗಳನ್ನು ಸ್ವಾಗತಿಸಿದರು. ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ ಧನ್ಯವಾದವಿತ್ತರು.

Related posts

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ: ಪಿಡಿಒ ಗಾಯತ್ರಿಯವರಿಗೆ ಬೀಳ್ಕೊಡುಗೆ- ಕಾರ್ಯವೈಖರಿಗೆ ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya
error: Content is protected !!