25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

ನಿಡ್ಲೆ: ಬರೆಂಗಾಯ ಪೊರ್ಕಳ ಕಸಬಾ ಭಟಾರಿ ಭೂತ ಆಡಳಿತ ಟ್ರಸ್ಟ್ ನ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ರಿಂದ 13ರವರೆಗೆ ನಡೆಯಲಿದೆ.

ಇಂದು(ಫೆ.12) ವಣಸಾಯದಲ್ಲಿ ವನದುರ್ಗಾರಾಧನೆ , ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನವು ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆ ಬರೆಂಗಾಯ ವಿಶ್ವಸ್ಥ ಮಂಡಳಿ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು, ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ನಡೆಯಲಿದೆ.

ಫೆ. 13 ರಂದು ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
error: Content is protected !!