July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು.


ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ, ತುರ್ತು ಆರೋಗ್ಯ ಸೇವೆ, ಮಾಹಿತಿ ವಿಭಾಗ, ಪೊಲೀಸ್ ಚೌಕಿಯನ್ನೂ ತೆರೆಯಲಾಗಿದೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕಡೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಯಂ-ಸೇವಕರು ಪಾದಯಾತ್ರಿಗಳ ಸೇವೆಗೆ ಸಜ್ಜಾಗಿದ್ದಾರೆ.

Related posts

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

Suddi Udaya
error: Content is protected !!