ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ ೫೦,೦೦೦ಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.

ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು.


ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ, ತುರ್ತು ಆರೋಗ್ಯ ಸೇವೆ, ಮಾಹಿತಿ ವಿಭಾಗ, ಪೊಲೀಸ್ ಚೌಕಿಯನ್ನೂ ತೆರೆಯಲಾಗಿದೆ.

ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕಡೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಯಂ-ಸೇವಕರು ಪಾದಯಾತ್ರಿಗಳ ಸೇವೆಗೆ ಸಜ್ಜಾಗಿದ್ದಾರೆ.

Related posts

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya
error: Content is protected !!